ಬೆಂಗಳೂರು: ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಇರುವ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ ಎಂದು ತಿಳಿದುಬಂದಿದೆ.
ಪಾಲಿಕೆಯ ಆದೇಶದಂತೆ ನಗರದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳು ಸೋಮವಾರ ಬಂದ್ ಆಗಿರಲಿವೆ.
ಮಕ್ಕಳೂ ಸೇರಿದಂತೆ ಎಲ್ಲಾ ವರ್ಗದವರೂ ಭಕ್ತಿ ಮತ್ತು ಸಂಭ್ರಮದೊಂದಿಗೆ ಆಚರಿಸುವ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈಗಾಗಲೇ ಬೆಂಗಳೂರು ನಗರದ ನಾನಾ ದೇವಾಲಯಗಳಲ್ಲಿ ಸಿದ್ಧತೆಗಳು ಆರಂಭವಾಗಿವೆ.