ಬೆಂಗಳೂರು : ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ವೇಳೆ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಕಿಂಗ್ ಪಿನ್ ಹ್ಯಾಕರ್ ಶ್ರೀಕಿ ಜಾಮೀನಿನ ಮೇಲೆ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಹೌದು, ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾನೆ. ಅಂದ್ಹಾಗೆ, ಹೊಟೇಲ್ʼನಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಜೈಲು ಪಾಲಾಗಿದ್ದ ಶ್ರೀಕಿ, ಇಂದು ಬಿಡುಗಡೆಯಾಗಿದ್ದಾನೆ.
ಜೈನಿಂದ ಹೊರಬಂದ ಬಳಿಕ ಮಾತನಾಡಿದ ಶ್ರೀಕಿ, ‘ ಬಿಟ್ ಕಾಯಿನ್ ಕೇಸ್ ಬಗ್ಗೆ ಏನು ಗೊತ್ತಿಲ್ಲ. ನಾನು ಏನು ಮಾಡಿಲ್ಲ. ಮಾಧ್ಯಮದವರೇ ಎಲ್ಲವನ್ನೂ ಸೃಷ್ಟಿ ಮಾಡುತ್ತಿದ್ದಾರೆ. ನನಗೆ ಜಾಮೀನು ಯಾರು ನೀಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಇನ್ನು ಪೋಲಿಸರು ಹಣ ಸೀಜ್ ಮಾಡಿರುವುದು ಸುಳ್ಳು. ನಾನು ಸಧ್ಯ ಹೆಬ್ಬಾಳದ ಆಸ್ಪತ್ರೆಗೆ ತೆರಳುತ್ತಿದ್ದು, ನಮ್ಮ ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದರು.