News Karnataka Kannada
Monday, April 29 2024
ಬೆಂಗಳೂರು

ಜಿಲ್ಲೆಗೊಂದು ಗೋಶಾಲೆ ತೆರೆಯಲು ₹ 15 ಕೋಟಿ ಬಿಡುಗಡೆ

Cows 14082021
Photo Credit :

ಬೆಂಗಳೂರು: ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಗೋಹತ್ಯೆ ನಿಷೇಧ) ಕಾಯ್ದೆ ಅನುಷ್ಠಾನಕ್ಕೆ ಪೂರಕವಾಗಿ ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆಗಳನ್ನು ಆರಂಭಿಸಲು ಪಶುಸಂಗೋಪನಾ ಇಲಾಖೆಯು ₹ 15 ಕೋಟಿ ಅನುದಾನ ಬಿಡುಗಡೆ ಮಾಡಿ ಆಗಸ್ಟ್‌ 11ರಂದು ಆದೇಶ ಹೊರಡಿಸಿದೆ.

ಅಕ್ಟೋಬರ್‌ 2ರ ಒಳಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಗೋಶಾಲೆ ಆರಂಭಿಸಬೇಕು. ಇದಕ್ಕಾಗಿ ಪ್ರತಿ ಜಿಲ್ಲೆಗೆ ತಲಾ ₹ 24 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು.

ಗೋಶಾಲೆಗಳ ನಿರ್ಮಾಣದಲ್ಲಿ ಕೊಟ್ಟಿಗೆ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಮೇವು ಉತ್ಪಾದನೆ ಮತ್ತಿತರ ಚಟುವಟಿಕೆಗಳಿಗೆ ಇತರೆ ಯೋಜನೆಗಳನ್ನೂ ಬಳಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸುವುದು ಅಥವಾ ಖಾಸಗಿ ಸಂಸ್ಥೆಗಳಿಂದ ನಡೆಯುತ್ತಿರುವ ಗೋಶಾಲೆಗಳ ವಿಸ್ತರಣೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಗಳು ತೀರ್ಮಾನ ಕೈಗೊಳ್ಳಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು