ಬೆಂಗಳೂರು : ‘ಜೀರೋ ಟ್ರಾಫಿಕ್ ಬೇಡ, ಸಿಗ್ನಲ್ ಫ್ರೀ ವ್ಯವಸ್ಥೆ ನನಗೆ ಬೇಡ’ ಹೌದು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಸರಳತೆಗೆ ನಾಂದಿ ಹಾಡಿದ್ದಾರೆ. ವಿಶೇಷ ಸವಲತ್ತು ಬೇಡ ಎಂದು ಗೃಹ ಸಚಿವರು ತಿಳಿಸಿದ್ದಾರೆ. ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ ಸೌಲಭ್ಯ ಬಳಸಿಕೊಳ್ತೀನಿ. ವಿಶೇಷ ಸವಲತ್ತು ಬೇಡ ಎಂದಿರುವ ಸಚಿವರು ಪೋಲೀಸ್ ಇಲಾಖೆಗೆ ಮೌಖಿಕ ಸೂಚನೆ ನೀಡಿದ್ದಾರೆ. ಆಯಕಟ್ಟಿನ ಸ್ಥಾನದಲ್ಲಿ ಇರುವವರು ಇಂಥ ಸೌಲಭ್ಯ ಬಳಸಿಕೊಳ್ಳುವುದು ಹಲವು ಸಾರಿ ಟೀಕೆಗೆ ಗುರಿಯಾಗುತ್ತಿತ್ತು. ಹಿಂದೆ ಡಾ. ಜಿ. ಪರಮೇಶ್ವರ ಗೃಹ ಸಚಿವರಾಗಿದ್ದಾಗ ಝೀರೋ ಟ್ರಾಫಿಕ್ ವ್ಯವಸ್ಥೆ ಬಳಸಿಕೊಂಡು ಟೀಕೆಗೆ ಗುರಿಯಾಗಿದ್ದರು. ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಏರಿದರು. ಇದಾದ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಒಲಿದು ಬಂದಿತ್ತು .
|
|
‘ಜೀರೋ ಟ್ರಾಫಿಕ್ ಬೇಡ, ಸಿಗ್ನಲ್ ಫ್ರೀ ವ್ಯವಸ್ಥೆ ನನಗೆ ಬೇಡ’ : ಆರಗ ಜ್ಞಾನೇಂದ್ರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.