News Karnataka Kannada
Thursday, May 02 2024
ಬೆಂಗಳೂರು

ಜೆಡಿಎಸ್ ಜಲಧಾರೆ ಸಮಾರೋಪದಲ್ಲಿ 4 ಲಕ್ಷ ಜನ ಸೇರುವ ನಿರೀಕ್ಷೆ :ಎಚ್ ಡಿ ಕುಮಾರಸ್ವಾಮಿ

Untitled 1
Photo Credit :

ಬೆಂಗಳೂರು: ಮೇ 13 ರಂದು ಜೆಡಿಎಸ್ ಮಹತ್ವಾಕಾಂಕ್ಷೆಯ ‘ಜನತಾ ಜಲಧಾರೆ’ ಸಮಾರೋಪ ಸಮಾರಂಭ ನಡೆಯಲಿದ್ದು, 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಮಂಗಳವಾರ ನೆಲಮಂಗಲ ಮೈದಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ನದಿಗಳ ನೀರನ್ನು ಸಂಗ್ರಹಿಸಿ ಆರಂಭ ಮಾಡಿದ ಕಾರ್ಯಕ್ರಮ ಇದಾಗುದ್ದಿ, 180 ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಸ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದ ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಹೊರ ವಲಯದಲ್ಲಿ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೆಲಮಂಗಲ ಬಾವಿ ಕೆರೆ ರಸ್ತೆಯಲ್ಲಿರುವ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭ ಆಗಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಜನರಿಗೆ ಭರವಸೆ ಕೊಟ್ಟರೂ ನಿಗದಿತ ಅವಧಿಯಲ್ಲಿ ಕಾರ್ಯಕ್ರಮ ಮುಗಿಸಿಲ್ಲ. ಕೃಷ್ಣ ಮೇಲ್ಕಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಮನವಿ ಮಾಡಿದ್ದಾರೆ. ಎತ್ತಿನ ಹೊಳೆ, ಮಹದಾಯಿ ಯೋಜನೆಗೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಯೋಜನೆಗಳನ್ನು ಜಾರಿಗೊಳಿಸದೆ ಸಬೂಬು ಕೊಟ್ಟು ತಳ್ಳುತ್ತಿದ್ದಾರೆ. ರಾಜ್ಯದ ಸಂಪತ್ತು ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿದರು.

ನಮ್ಮ ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೂ ಅಸಾಧ್ಯ ಇಲ್ಲ. ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಬರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ವತಂತ್ರ ಸರ್ಕಾರ ಬಂದರೆ ಐದು ವರ್ಷದಲ್ಲಿ ಎಲ್ಲ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನೀರಿನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಹೀಗೆ ಮುಂದುವರೆದರೆ ಬೆಂಗಳೂರು ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆಧೋರಲಿದೆ. ಅರ್ಕಾವತಿ ನದಿ ಪುನಶ್ಚೇತನ ಅಂದರು. ಅದು ನಿಂತು ಹೋಯಿತು. ಬೆಂಗಳೂರು ಹಲವು ಕೆರೆಗಳನ್ನು, ರಾಜ ಕಾಲುವೆಗಳನ್ನು ನುಂಗಿ ಹಾಕಿದ್ದಾರೆ. ಅದನ್ನು ಸರಿಪಡಿಸಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಈ ಎಲ್ಲಾ ಕಾರಣಕ್ಕಾಗಿ ಜನತಾ ಜಲಧಾರೆ ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ಲಘುವಾಗಿ ಚರ್ಚೆ ಮಾಡಿದ್ದಾರೆ ಅವರಿಗೆ ಉತ್ತರ ಕೊಡುವ ಕಾರ್ಯಕ್ರಮ ಇದಾಗಿದೆ‌. ಸುಮಾರು ನಾಲ್ಕರಿಂದ ಐದು ಲಕ್ಷ ಜನ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಜನತಾ ಜಲಧಾರೆ ಕಾರ್ಯಕ್ರಮದ ಪ್ರಮುಖ ಹೈಲೆಟ್ ಗಂಗಾ ಆರತಿ. ಈ ಬಗ್ಗೆ ಮಾಹಿತಿ ನೀಡಿದ ಎಚ್ ಡಿ ಕೆ ಧರ್ಮದ ದಂಗಲ್ ಹೆಸರಿನಲ್ಲಿ ಸರ್ವ ಜನಾಂಗದ ಶಾಂತಿ ತೋಟದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ನಮ್ಮ ರಾಜ್ಯ ಉತ್ತರ ಪ್ರದೇಶ ಗುಜರಾತ್ ಆಗಲು ಬಿಡಲ್ಲ. ಆದರೆ ನಮ್ಮ ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6.30 ಗೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ 20 ಜನರ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ.ನಮ್ಮ ರಾಜ್ಯದಲ್ಲಿ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಗಂಗಾ ತಾಯಿ ಆಶೀರ್ವಾದ ಪಡೆಯಲು ಈ‌ ಕಾರ್ಯಕ್ರಮ ಹಮ್ಕಿಕೊಳ್ಳಲಾಗಿದೆ ಎಂದರು.

ನೆಲಮಂಗಲ ಮೈದಾನದಿಂದಲೇ 2023 ರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಬೆಂಗಳೂರಿಂದ ಹಾಸನ , ಶಿವಮೊಗ್ಗ ಕಡೆ ಪ್ರಯಾಣ ಮಾಡುವ ಜನರಿಗೆ ಸ್ವಲ್ಪ ತೊಂದರೆ ಆಗಬಹುದು. ಅದಕ್ಕೆ ಪರ್ಯಾಯ ರಸ್ತೆ ಬಳಕೆ ಮಾಡುವಂತೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು