News Karnataka Kannada
Saturday, May 11 2024
ಬೆಂಗಳೂರು

ಟಿಕೆಟ್ ಇಲ್ಲದೆ ಪರದಾಡುತ್ತಿದ್ದ ರಾಜ್ಯದ 1300ಕ್ಕೂ ಹೆಚ್ಚು ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ : ಎಸ್.ಆರ್.ವಿಶ್ವನಾಥ್

Tirupathi
Photo Credit :

ಬೆಂಗಳೂರು, ಅ.28 : ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್ ಇಲ್ಲದೆ ಪರದಾಡುತ್ತಿದ್ದ ರಾಜ್ಯದ 1300ಕ್ಕೂ ಹೆಚ್ಚು ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ಸದಸ್ಯರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಕಾಲದಲ್ಲಿ ಟಿಕೆಟ್ ವ್ಯವಸ್ಥೆ ಕಲ್ಪಿಸಿ ದೇವರ ದರ್ಶನ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲಾಯ ಕುಣಿಗಲ್‍ನ 1300ಕ್ಕೂ ಹೆಚ್ಚು ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ತಿರುಮಲಕ್ಕೆ ಕಳೆದ ವಾರ ಪಾದಯಾತ್ರೆ ಆರಂಭಿಸಿ, ಮಂಗಳವಾರ ರಾತ್ರಿ ತಿರುಪತಿ ತಲುಪಿದರು. ಮುಂಗಡವಾಗಿ ಟಿಕೆಟ್ ಪಡೆಯದಿದ್ದರಿಂದ ಅಲ್ಲಿಂದ ತಿರುಮಲ ಬೆಟ್ಟಕ್ಕೆ ಹತ್ತಲು ಅವರಿಗೆ ಭದ್ರತಾ ಸಿಬ್ಬಂದಿ ಅನುಮತಿ ನಿರಾಕರಿಸಿದರು.

ಪಾದಯಾತ್ರೆ ನೇತೃತ್ವ ವಹಿಸಿದ್ದ ಮುಖಂಡರು ಎಸ್.ಆರ್.ವಿಶ್ವನಾಥ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಮ್ಮ ಆತಂಕ ತೋಡಿ ಕೊಂಡರು. ಕೂಡಲೇ ವಿಶ್ವನಾಥ್ ಅವರು ಟಿಟಿಡಿ ಮುಖ್ಯಸ್ಥರು, ಅಕಾರಿಗಳು ಹಾಗೂ ತಿರುಮಲದಲ್ಲಿರುವ ತಮ್ಮ ಆಪ್ತ ಸಹಾಯಕರಿಗೆ ಕರೆ ಮಾಡಿ ಪಾದಯಾತ್ರೆ ಮೂಲಕ ಬಂದಿರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಇದೇ ವೇಳೆ ಎಲ್ಲಾ 1300 ಭಕ್ತರಿಗೂ ತಿರುಮಲ ಬೆಟ್ಟಕ್ಕೆ ಮತ್ತು ದರ್ಶನಕ್ಕೆ ಅವಕಾಶ ಕಲ್ಪಿಸುವ ಟಿಕೆಟ್ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು. ವಿಶ್ವನಾಥ್ ಅವರ ಸೂಚನೆಯಿಂದಾಗಿ ತಿರುಮಲ ದೇವಸ್ಥಾನಂನ ಅಕಾರಿಗಳು ಮೊನ್ನೆ ರಾತ್ರಿಯೇ 800 ಭಕ್ತರಿಗೆ ಟಿಕೆಟ್ ವ್ಯವಸ್ಥೆ ಕಲ್ಪಿಸಿದರೆ, ಉಳಿದ 500 ಭಕ್ತರಿಗೆ ನಿನ್ನೆ ಬೆಳಗ್ಗೆ ಟಿಕೆಟ್ ಕಲ್ಪಿಸಿದರು.

ಭಕ್ತರಿಂದ ಧನ್ಯವಾದ: ತಾವು ಸಂಕಷ್ಟಕ್ಕೆ ಸಿಲುಕಿದ್ದ ಮಾಹಿತಿ ತಿಳಿದು ಕೂಡಲೇ ತಮಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದ ಎಸ್.ಆರ್.ವಿಶ್ವನಾಥ್ ಅವರಿಗೆ ಭಕ್ತರು ಧನ್ಯವಾದ ಅರ್ಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್, ಕೊರೊನಾ ಹಿನ್ನೆಲೆಯಲ್ಲಿ ಸೀಮಿತ ಸಂಖ್ಯೆಯ ಭಕ್ತರಿಗೆ ಟಿಕೆಟ್ ವಿತರಿಸಲಾಗುತ್ತದೆ. ಮುಂಗಡವಾಗಿ ಟಿಕೆಟ್ ಮತ್ತು ವಾಸ್ತವ್ಯದ ವ್ಯವಸ್ಥೆ ಯನ್ನು ಮಾಡಿಕೊಂಡ ನಂತರವಷ್ಟೇ ತಿರುಮಲಕ್ಕೆ ತೆರಳಬೇಕು. ಹೀಗೆ ಮೊದಲೇ ಎಲ್ಲಾ ವ್ಯವಸ್ಥೆ ಮಾಡಿ ಕೊಂಡರೆ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು