ಬೆಂಗಳೂರು: ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ಗಳ ತೆರವು ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಬೆಸ್ಕಾಂ ಸಲ್ಲಿಸಿದ ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್ ಫಾರ್ಮರ್ಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ಫಾರ್ಮರ್ಗಳ ತೆರವು ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ಮನೋಜ್ ಜೈನ್ ನೇತೃತ್ವದ ಬೆಸ್ಕಾಂ ಹಾಗೂ ಪಾಲಿಕೆಯ ಅಧಿಕಾರಿಗಳ ಉನ್ನತ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಸಮಿತಿಯು ಸೆ.6ರಂದು ಸಭೆ ನಡೆಸಿದ್ದು, ಬಿಬಿಎಂಪಿ ಮತ್ತು ಬೆಸ್ಕಾಂನ ಎಲ್ಲಾ ಮುಖ್ಯ ಎಂಜಿನಿಯರ್ಗಳಿಂದ ತರಿಸಿಕೊಂಡ ವರದಿಗಳನ್ನು ಪರಿಶೀಲಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದೆ ಎಂದು ತಿಳಿಸಿದರು.
ಅಲ್ಲದೆ, ಈ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಬಿಬಿಎಂಪಿ ಸಹ ಪ್ರಮಾಣಪತ್ರ ಸಲ್ಲಿಸಿ, ವಿಶೇಷ ಆಯುಕ್ತ ಮನೋಜ್ ಜೈನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡಾವಳಿಯ ಮಾಹಿತಿ ನೀಡಿದೆ. ಬೆಸ್ಕಾಂ ಪರ ವಾದಿಸಿದ ವಕೀಲ ಎಸ್.ಶ್ರೀರಂಗ, ನಗರದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್ಗಳ ತೆರವು ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಪ್ರಮಾಣಪತ್ರ ಸಲ್ಲಿಸಿದರು.ಈಗಾಗಲೇ ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್ಗಳನ್ನು ಸರ್ವೆ ನಡೆಸಿದೆ. ಹಾಗೆಯೇ, ಸ್ಥಳಾಂತರಿಸಬಹುದಾದ ಟ್ರಾನ್ಸ್ ಫಾರ್ಮರ್ಗಳನ್ನು ಗುರುತಿಸಲಾಗಿದೆ. ಸ್ಥಳಾಂತರಿಸಲು ಸಾಧ್ಯವಾಗದ ಟ್ರಾನ್ಸ್ಫಾರ್ಮರ್ಗಳನ್ನು ಹೊಸ ವಿನ್ಯಾಸಕ್ಕೆ (ಸ್ಪನ್ ಪೋಲ್ ಬಳಸಿ ಅಳವಡಿಸುವುದು) ಪರಿವರ್ತಿಸಲು ನಿರ್ಧರಿಸಲಾಗಿದೆ. ಈಗಾಗಲೇ ಸ್ಥಳಾಂತರ ಕಾರ್ಯವೂ ಆರಂಭಿಸಲಾಗಿದ್ದು, ಅದನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಬೇಕೆಂದು ಕೋರಿದರು. ನಗರದಲ್ಲಿರುವ ಒಟ್ಟು ಟ್ರಾನ್ಸ್ ಫಾರ್ಮರ್ಗಳು, ಅದರಲ್ಲಿ ಸ್ಥಳಾಂತರಿಸಲಾಗದ, ಸ್ಥಳಾಂತರಿಸಬಹುದಾದ ಮತ್ತು ಸ್ಪನ್ ಪೋಲ್ಗೆ ಪರಿವರ್ತಿಸಬಹುದಾದ ಟ್ರಾನ್ಸ್ ಫಾರ್ಮರ್ಗಳ ಅಂಕಿ- ಅಂಶದ ವಿವರಗಳನ್ನು ಹೈಕೋರ್ಟ್ಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.