ಬೆಂಗಳೂರು: ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗದೆ ಲಕ್ಷಾಂತರ ಜನರ ಸಾವಿಗೆ ಕಾರಣವಾಗಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯವನ್ನು ಮರೆಮಾಚಲು ಡಬ್ಲ್ಯೂಎಚ್ ಒ ನೀಡಿರುವ ಮಹಿತಿಯೇ ಸರಿಯಿಲ್ಲ ಎಂದು ಸಾಧಿಸಲು ಹೊರಟಿರುವುದು ಮೂರ್ಖತನದ ಪರಮಾವಧಿ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಅವರು, ಭಾರತದಲ್ಲಿನ ಕೋವಿಡ್ ಮರಣ ಪ್ರಮಾಣವು ವಿಶ್ವದಲ್ಲೇ ಅತಿ ಹೆಚ್ಚು. ಡಬ್ಲ್ಯೂ.ಹೆಚ್.ಒ ನೀಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕೋವಿಡ್ ನಿಂದ ಮೃತಪಟ್ಟರ ಸಂಖ್ಯೆ 47 ಲಕ್ಷ. ಆದರೆ, ಕೇಂದ್ರ ಸರ್ಕಾರ ಕೇವಲ 4 ಲಕ್ಷ ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಹೇಳುವ ಮೂಲಕ ದೇಶದ ಜನರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಹೇಳಿದ್ದಾರೆ.