ಬೆಂಗಳೂರು: ಕೇಂದ್ರ ಸರ್ಕಾರವು ತಳವಾರ, ಪರಿವಾರದ ಪಂಗಡದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿದೆ. ಆದ್ರೇ.. ರಾಜ್ಯ ಸರ್ಕಾರ ಮಾತ್ರ ಜಾತಿ ಪಟ್ಟಿಯಲ್ಲಿ ಇನ್ನೂ ಪ್ರವರ್ಗ-1ರಲ್ಲಿಯೇ ಉಳಿಸಿತ್ತು. ಇದೀಗ ಈ ಪಟ್ಟಿಯಿಂದ ತೆಗೆದು ಹಾಕಿ, ಎಸ್ಟಿ ಪಟ್ಟಿಗೆ ಸೇರ್ಪಡೆಯನ್ನು ಶೀಘ್ರವೇ ಮಾಡಲಾಗುತ್ತದೆ ಎಂಬುದಾಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಪರಿಷತ್ ಸದಸ್ಯ ಡಾ.ತಳವಾರ ಸಾಬಣ್ಣ ಅವರು ಕೇಳದಾಂತ ಚುಕ್ಕೆಗುರುತಿನ ಪ್ರಶ್ನೆಗೆ ಸರ್ಕಾರದಿಂದ ತಡವಾಗಿ ಉತ್ತರ ನೀಡಲಾಗಿದೆ. ಆ ಪ್ರಕಾರವಾಗಿ ತಳವಾರ ಮತ್ತು ಪರಿವಾರ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಡುವ ಬಗ್ಗೆ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ವತಿಯಿಂದ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೊಳಿಸಿದ್ದರೂ ಈವರೆಗೂ ಜಾತಿ ಪ್ರಮಾಣ ಪತ್ರ ನೀಡಿಲ್ಲ. ಇದಕ್ಕೆ ಪ್ರವರ್ಗ-1ರಿಂದ ಆ ಎರಡು ಪದಗಳನ್ನು ತೆಗೆದು ಹಾಕದಿರೋದೆ ಕಾರಣ. ಹೀಗಾಗಿ ಉತ್ತರ ಕರ್ನಾಟಕ ಸಮುದಾಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಶೀಘ್ರವೇ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು, ನಿಗದಿತ ಅವಧಿಯೊಳಗೆ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸೂಚಿಸಲಾಗುತ್ತದೆ ಎಂದರು.