News Karnataka Kannada
Saturday, May 04 2024
ಬೆಂಗಳೂರು

ದೀಪಾವಳಿಗೆ ಹೊಸ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ

Crackers
Photo Credit :

ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಯಲ್ಲಿ ಮೈಮರೆತು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕೊರೊನಾ ಮಾಹಾಮಾರಿ ರಾಜ್ಯದಲ್ಲಿ ಸೃಷ್ಟಿಸಿದ ಅವಾಂತರಗಳಿಂದ ಜನ ಈಗಿನ್ನು ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಒಂದು ದಿನ ಹಬ್ಬದ ಸಡಗರದಲ್ಲಿ ಮೈಮರೆತು ಅಪತ್ತಿಗೆ ಸಿಲುಕಿಕೊಳ್ಳದಿರಲು ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೂ ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ದೀಪಾವಳಿ ಅಂದರೆ ಪಟಾಕಿ ಸಿಡಿಸಿ ಆಚರಿಸುವುದು ಎಲ್ಲೆಡೆ ರೂಢಿಯಲ್ಲಿದೆ. ಆದರೆ ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾತ್ರವಲ್ಲದೇ ಮಾರಾಟಗಾರರೂ ಸಹ ಬೇರೆ ಯಾವ ಪಟಾಕಿಯನ್ನೂ ಮಾರುವಂತಿಲ್ಲ ಎಂದು ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಬೇರೆ ಪಟಾಕಿ ಮಾರಾಟ ಮಾಡುವುದಕ್ಕೆ ಅಥವಾ ಬೇರೆ ಪಟಾಕಿ ಹಚ್ಚಲು ಅವಕಾಶ ಇಲ್ಲ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಬೇರೆ ಪಟಾಕಿಗಳನ್ನು ಹಚ್ಚಲೂ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ದೀಪಾವಳಿ ಹಬ್ಬಕ್ಕೆ ಮನೆಮಂದಿಯಲ್ಲ ಸೇರಿ ಸಂಬಂಧಿಗಳೊಂದಿಗೆ ಸ್ನೇಹಿತರೊಂದಿಗೆ ಒಗ್ಗಟ್ಟಿನಿಂದ ದೀಪ ಹಚ್ಚುತ್ತಾರೆ. ಆದರೆ ಕೊರೊನಾ ಹಾವಳಿ ಮರುಕಳಿಸುವ ಆತಂಕ ಇರುವುದರಿಂದ ಇದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು ಹೆಚ್ಚಿನ ಜನ ಸೇರದಿರಲು ಮನವಿ ಮಾಡಿಕೊಂಡಿದೆ. ನವೆಂಬರ್ 1 ರಿಂದ ನವೆಂಬರ್ 10 ರವರೆಗೆ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದ ವಿತರಕರು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಅಂಗಡಿಗಳನ್ನು ಸ್ಥಾಪಿಸಲು ಅನುಮತಿಸಲಾಗುವುದು ಎಂದು ಮಾರ್ಗಸೂಚಿಗಳು ನಿರ್ದಿಷ್ಟಪಡಿಸುತ್ತವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು