ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತ್ತೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ಸೆ.7ರಂದು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಈ ಮೊದಲೇ ವರಿಷ್ಠರಿಂದ ಭೇಟಿಗೆ ಒಪ್ಪಿಗೆ ಸಿಕ್ಕಿದ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿಯ ಜೊತೆಗೆ ನಿಗಮ ಮಂಡಳಿ ನೇಮಕಾತಿ ಸೇರಿದಂತೆ ರಾಜ್ಯ ರಾಜಕೀಯ ವಿಚಾರ ಹಾಗೂ ಪಕ್ಷ ಸಂಘಟನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಬೊಮ್ಮಾಯಿ ಮಂತ್ರಿಮಂಡಲ ಸೇರಲು ಒಂದಿಷ್ಟು ಶಾಸಕರು ಬೆನ್ನುಬಿಡದೇ ಒತ್ತಡ ಹೇರುತ್ತಿದ್ದರೆ, ಮತ್ತೊಂದಿಷ್ಟು ಶಾಸಕರು ದೆಹಲಿ ವಲಯದಲ್ಲಿ ಲಾಬಿಯನ್ನು ತೀವ್ರಗೊಳಿಸಿದ್ದಾರೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ.