ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸುವುದಕ್ಕೆ ಇಂದಿನಿಂದ ಅವಕಾಶ ನೀಡಲಾಗಿದೆ.
ಕೋವಿಡ್ ಕಾರಣದಿಂದ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ದರ್ಶನಕ್ಕೆ ಸೀಮಿತಗೊಳಿಸಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಆದರೆ, ಯಾವುದೇ ರೀತಿಯ ಪೂಜೆ ಅಥವಾ ಸೇವೆಗೆ ಅವಕಾಶ ಇರಲಿಲ್ಲ.
ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಧಾರ್ಮಿಕ ಸ್ಥಳಗಳಲ್ಲಿ ಸೇವೆಗೆ ಅವಕಾಶ ನೀಡಲಾಗಿದೆ. ಜಾತ್ರೆ, ದೇವಸ್ಥಾನದ ಹಬ್ಬಗಳು, ಮೆರವಣಿಗೆ ಮತ್ತು ಸಮಾವೇಶಗಳಿಗೆ ಅನುಮತಿ ಇಲ್ಲ. ಮನರಂಜನಾ ಪಾರ್ಕ್ಗಳನ್ನು ತೆರೆಯಬಹುದು. ಜಲಕ್ರೀಡೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶ ಹೇಳಿದೆ.