ಬೆಂಗಳೂರು

ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.

ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್‌ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.

ಆಜಾನ್​ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್‌ ಚಾಲೀಸಾ ಮೊಳಗಿದೆ. ಆಜಾನ್​ ವರ್ಸಸ್​ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago