News Karnataka Kannada
Tuesday, April 30 2024
ಬೆಂಗಳೂರು

ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ : ಸಿಎಂ ಬೊಮ್ಮಾಯಿ

Cm Basavaraj Karvar 30072021
Photo Credit :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.
“ಕರ್ನಾಟಕದಲ್ಲಿ ದೀರ್ಘಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ  ರಾಮಕೃಷ್ಣ ಹೆಗಡೆಯವರು ರಾಜ್ಯದಲ್ಲಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ಕೇಂದ್ರದಲ್ಲಿ ವಿಪಿ ಸಿಂಗ್ ನೇತ್ರತ್ವದ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು” ಎಂದು ಬೊಮ್ಮಾಯಿ ಹೆಗಡೆಯವರ ನಾಯಕತ್ವವನ್ನು ಬಣ್ಣಿಸಿದ್ದಾರೆ
ಮೌಲ್ಯಾಧಾರಿತ ರಾಜಕಾರಣಕ್ಕೆ ನಿದರ್ಶನದಂತಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ರಾಮಕೃಷ್ಣ ಹೆಗಡೆಯವರ 95ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಗೌರವಪೂರ್ವಕ ನಮನಗಳು. ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ವ್ಯವಸ್ಥೆ ಜಾರಿಗೆ ತಂದ ಅವರ ದಿಟ್ಟ ಆಡಳಿತವನ್ನು ರಾಜ್ಯ ಸದಾ ಸ್ಮರಿಸುತ್ತದೆ.
“ಹೆಗಡೆಯವರ ಜೊತೆ ನನ್ನ ತಂದೆ ಎಸ್. ಆರ್. ಬೊಮ್ಮಾಯಿ ಅವರ ಸ್ನೇಹ ಸಂಬಂಧ ಅವರ ಜೀವನದ ಅಂತ್ಯದ ವರೆಗೂ ಇತ್ತು. ಹೆಗಡೆಯವರ ಸಂಪುಟದಲ್ಲಿ ಸಚಿವರಾಗಿ ಜನತಾದಳವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಹೆಗಡೆಯವರು ಮತ್ತು ಬೊಮ್ಮಾಯಿಯವರು ಅವಿಶ್ರಾಂತವಾಗಿ ಶ್ರಮಿಸಿದ್ದರು.”
“ಹೆಗಡೆಯವರು ರಾಜ್ಯ ಕಂಡ ಮುತ್ಸದ್ದಿ ನಾಯಕರು. ಮೌಲ್ಯಾಧಾರಿತ ರಾಜಕೀಯದ ಪ್ರವರ್ತಕರು. ದಕ್ಷ ಆಡಳಿತಕ್ಕೆ, ಪ್ರಾಮಾಣಿಕತೆಗೆ ಅವರು ಮಾದರಿ. ಹೆಗಡೆಯವರ ಕೊಡುಗೆ ರಾಜ್ಯಕ್ಕೆ ಅಪಾರ.  ಮುಖ್ಯವಾಗಿ ಆಡಳಿತ ವಿಕೇಂದ್ರೀಕರಣಕ್ಕೆ ಅವರು ಮಾಡಿದ ಪಂಚಾಯತ್ ರಾಜ್ ವ್ಯವಸ್ಥೆ ದೇಶದಲ್ಲಿ ಅನುಕರಣೀಯ ವೆಂದು ಪ್ರಶಂಸೆಗೆ ಪಾತ್ರವಾಗಿದೆ. ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ. ಅತ್ಯಂತ ಧನ್ಯತೆಯಿಂದ ಸ್ಮರಿಸಿ ಕೊಳ್ಳುತ್ತೇನೆ.” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು