ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಬೆಂಗಳೂರು : ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಬೆಂಗಳೂರು ನಮ್ಮ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ  ಸಮಯವನ್ನು ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕೊರೋನಾ ಕಾರಣದಿಂದ ಈ ಮೊದಲು ರೈಲು ಓಡಾಟದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಇದೀಗ ರಾತ್ರಿ 10ರ ವರೆಗೆ ವಿಸ್ತರಿಸಲಾಗಿದೆ.

ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸುವಂತೆ ಮಾಜಿ ಸಚಿವ ಸುರೇಶ್‌ಕುಮಾರ್‌ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ
ಪತ್ರ ಬರೆದಿದ್ದರು.

ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 9ರವರೆಗೆ ಮಾತ್ರ ಮೆಟ್ರೋ ಸಂಚಾರವಿದೆ. ರಾತ್ರಿ 9 ಗಂಟೆಯ ಬಳಿಕ ಮೆಟ್ರೋ ಸಂಚಾರ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾತ್ರಿ 10 ಗಂಟೆಯವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕ ಸುರೇಶ್‌ ಕುಮಾರ್ ಪತ್ರ ಬರೆದಿದ್ದರು.

ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಲಾಕ್​ಡೌನ್ ಮುಂಚೆ ಮೆಟ್ರೋ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದವು. ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗುತ್ತಿದೆ. ಹೀಗಾಗಿ ಎರಡು ಕಡೆ ಪ್ರವೇಶ ದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಎಂದು ಸುರೇಶ್ ಕುಮಾರ್ ಬರೆದ ಪತ್ರದಲ್ಲಿ ವಿನಂತಿ ಮಾಡಿದ್ದರು.

Raksha Deshpande

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

8 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

24 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

27 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

50 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago