ನಳಿನ್ ಕುಮಾರ್ ಕಟೀಲ್ ಹಸುವಿನಂತಹ ಮನುಷ್ಯ ; ಎಂ.ಪಿ. ರೇಣುಕಾಚಾರ್ಯ ಅಭಿಪ್ರಾಯ

ಬೆಂಗಳೂರು : ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸುವಿನಂತಹ ಮನುಷ್ಯ. ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ.

‘ಬಿಟ್‌ಕಾಯಿನ್‌ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಏಕೆ ಮಾತನಾಡುತ್ತಿಲ್ಲ’ ಎಂಬ ವಿರೋಧ ಪಕ್ಷದ ಮುಖಂಡರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ನಳಿನ್‌ ಅವರು ಸಂಘಟನೆಯಲ್ಲೇ ತಮ್ಮನ್ನು ತೊಡಗಿಸಿಕೊಂಡವರು.

ಅವರದ್ದು ಸೌಮ್ಯ ಸ್ವಭಾವ. ಕಾಂಗ್ರೆಸ್‌ನವರು ಸುದ್ದಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ತಮ್ಮ ಕರ್ಮಕಾಂಡವನ್ನು ನೋಡಿಕೊಳ್ಳಲಿ’ ಎಂದರು.

ಬಿಟ್‌ಕಾಯಿನ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕರ ಮಕ್ಕಳು ಶಾಮೀಲಾಗಿದ್ದಾರೆ. ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯುತ್ತದೆ ಎಂಬ ಹತಾಶೆಯಿಂದ ಈ ರೀತಿ ಸುಳ್ಳು ಆರೋಪ ಕೆಟ್ಮಾಡುತ್ತಿದ್ದಾರೆ ಎಂದು ಹೇಳಿದರು.

Gayathri SG

Recent Posts

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

6 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

8 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

30 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

42 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago