‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ನಿಧನ

‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ಅವರು ಇಂದು ಮೃತಪಟ್ಟಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ವಿಜಯಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗಾಂಧಿನಗರದ ಸಂತೃಪ್ತಿ ಹೊಟೇಲ್​​ನಲ್ಲಿ ವಿಜಯಲಕ್ಷ್ಮಿ ಕುಟುಂಬ ವಾಸವಾಗಿತ್ತು.

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಗೆ ಕೊರೋನಾ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಈ ಬಗ್ಗೆ ವಿಡಿಯೋ ಮಾಡಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

‘ನಾನು ತುಂಬಾ ನರಳುತ್ತಿದ್ದೇನೆ. ಐದು ದಿನದಿಂದ ಜ್ವರ ಬಂದಿದೆ. ಕಷ್ಟಪಟ್ಟು ಆಸ್ಪತ್ರೆಗೆ ಬಂದಿದ್ದೇನೆ. ನಾನು ಕೋವಿಡ್​ ಸೆಂಟರ್​ಗೆ ಹೋಗಬೇಕು. ಈ ಬಗ್ಗೆ ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದೇನೆ. ನಾನು ಎಲ್ಲರ ಜತೆಯೂ ಮಾತನಾಡುತ್ತಾ ಇದ್ದೇನೆ. ಆದರೆ, ಪ್ರಯೋಜನ ಆಗುತ್ತಿಲ್ಲ. ನನಗೆ ಕೋವಿಡ್ ನ್ಯುಮೋನಿಯಾ ಅಟ್ಯಾಕ್​ ಆಗಿದೆ. ನಾನು ಉಳಿಯುವ ರೀತಿ ಕಾಣುತ್ತಿಲ್ಲ. ಐದು ದಿನದಿಂದ ಊಟ ಸರಿಯಾಗಿ ಸಿಗುತ್ತಿಲ್ಲ. ನಾನು ಎಲ್ಲಿಯೂ ಹೋಗಿಲ್ಲ. ಕರ್ನಾಟಕದಲ್ಲೇ ಇದ್ದೇನೆ’ ಎಂದಿದ್ದರು.ಅಲ್ಲದೇ ಅಕ್ಕ ಉಷಾ ಕೂಡ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅಕ್ಕನಿಗೆ ಸರಿಯಾಗಿ ಚಿಕಿತ್ಸೆ ಕೂಡ ಆಗುತ್ತಿಲ್ಲ ಎಂದು ನಟಿ ಸಾಕಷ್ಟು ನೊಂದಿದ್ದರು.

Sneha Gowda

Recent Posts

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

4 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

8 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

10 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

21 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

23 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

47 mins ago