ಬೆಂಗಳೂರು: ಅದೃಷ್ಟವಂತ ಮುಖ್ಯಮಂತ್ರಿ ನಾನು. ಇದೇ ಖಾತೆ ಬೇಕೆಂದು ಯಾವ ಸಚಿವರು ನನಗೆ ಒತ್ತಡ ಹಾಕುತ್ತಿಲ್ಲ, ಗಂಟೆಯೊಳಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯಾರೂ ಇಂಥದ್ದೆ ಖಾತೆಗೂ ಪಟ್ಟು ಹಿಡಿದಿಲ್ಲ. ನಾನು ನಿಜಕ್ಕೂ ಅದೃಷ್ಟವಂತ ಮುಖ್ಯಮಂತ್ರಿ. ಸಚಿವ ಸಂಪುಟದವರು ಯಾರೂ ಪ್ರಭಾವ ಬೀರಿಲ್ಲ. ಕೆಲವರು ಇಂಥ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆಯೇ ಹೊರತು ಯಾರ ಒತ್ತಡವೂ ಇಲ್ಲ ಎಂದು ಹೇಳಿದರು.
ಕೋವಿಡ್ ಸಭೆಯ ಬಳಿಕ ವಚನಾನಂದ ಸ್ವಾಮೀಜಿ ಭೇಟಿ ಮತ್ತು ಸಿದ್ದಗಂಗಾ ಮಠಕ್ಕೆ ತೆರಳಿ ಶುಕ್ರವಾರ ರಾತ್ರಿ ತಡವಾಗಿ ಬಂದೆ. ಹೀಗಾಗಿ, ಖಾತೆ ಹಂಚಿಕೆ ಸಾಧ್ಯ ಆಗಿಲ್ಲ. ರಾತ್ರಿ ತಡವಾಗಿ ಖಾತೆ ಹಂಚಿಕೆ ಮಾಡಬೇಡಿ ಎಂದು ಕೆಲವರು ಸಲಹೆ ನೀಡಿದರು. ಹೀಗಾಗಿ ಮಾಡಿಲ್ಲ’ ಎಂದು ಸಮರ್ಥನೆ ನೀಡಿದರು.