News Karnataka Kannada
Saturday, May 11 2024
ಬೆಂಗಳೂರು

ನಾನು ಅದೃಷ್ಟವಂತ ಮುಖ್ಯಮಂತ್ರಿ: ಸಿಎಂ ಬಸವರಾಜ ಬೊಮ್ಮಾಯಿ

Basavaraja Bommai
Photo Credit :

ಬೆಂಗಳೂರು: ಅದೃಷ್ಟವಂತ ಮುಖ್ಯಮಂತ್ರಿ ನಾನು. ಇದೇ ಖಾತೆ ಬೇಕೆಂದು ಯಾವ ಸಚಿವರು ನನಗೆ ಒತ್ತಡ ಹಾಕುತ್ತಿಲ್ಲ, ಗಂಟೆಯೊಳಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾರೂ ಇಂಥದ್ದೆ ಖಾತೆಗೂ ಪಟ್ಟು ಹಿಡಿದಿಲ್ಲ. ನಾನು ನಿಜಕ್ಕೂ ಅದೃಷ್ಟವಂತ ಮುಖ್ಯಮಂತ್ರಿ. ಸಚಿವ ಸಂಪುಟದವರು ಯಾರೂ ಪ್ರಭಾವ ಬೀರಿಲ್ಲ. ಕೆಲವರು ಇಂಥ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆಯೇ ಹೊರತು ಯಾರ ಒತ್ತಡವೂ ಇಲ್ಲ ಎಂದು ಹೇಳಿದರು.

ಕೋವಿಡ್‌ ಸಭೆಯ ಬಳಿಕ ವಚನಾನಂದ ಸ್ವಾಮೀಜಿ ಭೇಟಿ ಮತ್ತು ಸಿದ್ದಗಂಗಾ ಮಠಕ್ಕೆ ತೆರಳಿ ಶುಕ್ರವಾರ ರಾತ್ರಿ ತಡವಾಗಿ ಬಂದೆ. ಹೀಗಾಗಿ, ಖಾತೆ ಹಂಚಿಕೆ ಸಾಧ್ಯ ಆಗಿಲ್ಲ. ರಾತ್ರಿ ತಡವಾಗಿ ಖಾತೆ ಹಂಚಿಕೆ ಮಾಡಬೇಡಿ ಎಂದು ಕೆಲವರು ಸಲಹೆ ನೀಡಿದರು. ಹೀಗಾಗಿ ಮಾಡಿಲ್ಲ’ ಎಂದು ಸಮರ್ಥನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು