ಬೆಂಗಳೂರು : ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ ಆರ್ ಟಿಸಿ ಸಂಸ್ಥೆ 500 ಕ್ಕೂ ಹೆಚ್ಚು ಬಸ್ ಗಳನ್ನು ಬಿಡಲಾಗುತ್ತಿದೆ.
ರಾಜ್ಯದಲ್ಲಿ ಕೊರೊನಾ ಆತಂಕದ ನಡುವೆಯೂ ನಾಳೆಯಿಂದ 9, 10 ನೇ ತರಗತಿ ಮತ್ತು ಪ್ರಥಮ, ದ್ವಿತೀಯ ಪಿಯುಸಿ ಕಾಲೇಜುಗಳು ಆರಂಭವಾಗಲಿದ್ದು, ಶಾಲೆ-ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮಯಕ್ಕೆ ಸರಿಯಾಗಿ ಕೆಎಸ್ ಆರ್ ಟಿಸಿ ಬಸ್ ಓಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.