ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮರು ದಿನವೇ ದಿಲ್ಲಿಗೆ ತೆರಳುತ್ತಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ವರಿಷ್ಠರ ಜತೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಬೆಳಗ್ಗೆ ದಿಲ್ಲಿಗೆ ತೆರಳಿರುವ ಅವರು ಕೇಂದ್ರ ಸಚಿವರು, ಪಕ್ಷದ ನಾಯಕರನ್ನು ಭೇಟಿ ಮಾಡಿ ಸಂಜೆಯೇ ಮರಳಲಿದ್ದಾರೆ. ಬಿಟ್ ಕಾಯಿನ್ ಹಗರಣ ತನಿಖೆಗೆ ಸಂಬಂಧಿಸಿ ಕೇಂದ್ರ ಸರಕಾರ ಮಾಹಿತಿ ಕೇಳಿರುವ ಹಿನ್ನೆಲೆಯಲ್ಲಿ ವರಿಷ್ಠರಿಗೆ ಮಾಹಿತಿ ನೀಡಲಿ ದ್ದಾರೆ ಎಂದೂ ತಿಳಿದು ಬಂದಿದೆ.
ಉಪ ಚುನಾವಣೆ ಫಲಿತಾಂಶದ ಅನಂತರ ದಿಲ್ಲಿ ಪ್ರವಾಸ ನಿಗದಿಯಾಗಿ ತ್ತಾದರೂ ದಿಢೀರ್ ರದ್ದಾಗಿತ್ತು.