ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರಿಂದಲೇ ಬಲವಂತದ ಮತಾಂತರ ಪ್ರಕರಣಗಳು ಬಯಲಿಗೆ ಬರುತ್ತಿವೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅಶೋಕ್, ಮತಾಂತರ ವಿಚಾರದ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಮತಾಂತರಿಗಳೆಲ್ಲ ದೇಶ ದ್ರೋಹಿಗಳು.ನೆಲದ ಸಂಸ್ಕೃತಿ ಹಾಳುಮಾಡಲು ಮತಾಂತರ ಮಾಡುತ್ತಿದ್ದಾರೆ.
ಮತಾಂತರ ವಿಚಾರವಾಗಿ ಈಗಾಗಲೇ ಬಿಸಿ ಬಿಸಿ ಚರ್ಚೆ ಆಗ್ತಿದೆ, ಅವರೆಲ್ಲ ದೇಶ ದ್ರೋಹಿಗಳು ಈ ನೆಲದ ಸಂಸ್ಕೃತಿ ಹಾಳುಮಾಡಲು ಮತಾಂತರ ಮಾಡುತ್ತಿದ್ದಾರೆ. ನೆಲದ ಸಂಸ್ಕೃತಿ ನಾಶ ಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತಾಂತರ ನಿಷೇಧ ಕಾಯ್ದೆ ತರಬೇಕು. ಯಾವುದೋ ದೇಶದ ಹಣದಿಂದಾಗಿ ಹೀಗೆ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಿಎಂ ಹಾಗೂ ಇಲಾಖೆ ಜೊತೆಗೆ ಮಾತನಾಡುತ್ತೇನೆ. ಒಂದು ಸೂಕ್ತ ಕಾಯ್ದೆ ತರಬೇಕು ಎಂದ ಅವರು ನಮ್ಮ ಬಿಜೆಪಿ ಸರ್ಕಾರ ಇರೋದಕ್ಕೆ ಇದೆಲ್ಲ ಆಚೆ ಬರುತ್ತಿದೆ ಎಂದರು.