ಬೆಂಗಳೂರು

ಪಂಡರಾಪುರ-ಯಶವಂತಪುರ ಮಧ್ಯೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ ಪುನರಾರಂಭ

ಪಂಡರಾಪುರ-ಯಶವಂತಪುರ ಮಧ್ಯೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ ಪುನರಾರಂಭವಾಗಿದೆ. ರೈಲು ಸಂಖ್ಯೆ 06217/06218 ಪಂಡರಾಪುರ-ಯಶವಂತಪುರ ರೈಲು ಮರು ಸಂಚಾರ ಪ್ರಾರಂಭಿಸುತ್ತದೆ. ಈ ರೈಲು ಸಾಪ್ತಾಹಿಕ ವಿಶೇಷವಾಗಿದ್ದು, ಮೊದಲ ಸಂಚಾರ ನ.11ರಂದು ಯಶವಂತಪುರದಿಂದ ಪ್ರಾರಂಭವಾಗುತ್ತದೆ.

ಯಶವಂತಪುರ ನಿಲ್ದಾಣದಿಂದ ಸಂಜೆ 6.15ಕ್ಕೆ ರೈಲು ಹೊರಟು ಮರುದಿನ ಬೆಳಗ್ಗೆ 11.25ಕ್ಕೆ ಪಂಡರಾಪುರ ತಲುಪುತ್ತದೆ. ಮರಳಿ ಅದೇ ರೈಲು ಪಂಡರಾಪುರದಿಂದ ನ.12ರಂದು ಮಧ್ಯಾಹ್ನ 1.35ಕ್ಕೆ ಹೊರಟು ಮರುದಿನ ಬೆಳಗ್ಗೆ ಬೆಳಗ್ಗೆ 6.10ಕ್ಕೆ ಯಶವಂತಪುರ ತಲುಪುತ್ತದೆ.

ಈ ರೈಲು ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎನ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಸಂಗೋಲಾ ಮಾರ್ಗವಾಗಿ ಪಂಡರಾಪುರ ತಲುಪುತ್ತದೆ.

ಈ ರೈಲಿನಲ್ಲಿ ಒಂದು ಎಸಿ ಪ್ರಥಮ ದರ್ಜೆ, ಎರಡು ಎಸಿ ಎರಡನೇ ದರ್ಜೆ, ನಾಲ್ಕು ಎಸಿ ಮೂರನೇ ದರ್ಜೆ, ಏಳು ಸ್ಲೀಪರ್ ಕ್ಲಾಸ್ ಹಾಗೂ ನಾಲ್ಕು ಸಾಮಾನ್ಯ ದರ್ಜೆ ಕೋಚ್‌ಗಳು ಇರುತ್ತವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

3 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

59 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago