ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು.. ಈ ತಿಂಗಳಿನಿಂದಲೇ ರಾಜ್ಯದ 14 ಜಿಲ್ಲೆಗಳಲ್ಲಿ ಪಡಿತರದ ಜೊತೆಗೆ ಸಾರವರ್ಧಿತ ಅಕ್ಕಿ ವಿತರಿಸಲಿದೆ.
ಆರ್ಥಿಕ ಕ್ರಮಗಳ ಪ್ರಯುಕ್ತ ಸರ್ಕಾರವು ‘ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ’ಯಡಿ ಮೇ-2022 ನೇ ಮಾಹೆಯಿಂದ ಸಾರವರ್ಧಿತ/ಬಲವರ್ಧಿತ ಅಕ್ಕಿ ವಿತರಿಸುವ ಯೋಜನೆಯನ್ನು ಆರಂಭಿಸಲಿದೆ.
2022 ಏಪ್ರಿಲ್ 8 ರಂದು ಕೇಂದ್ರ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳ ಅಡಿಯಲ್ಲಿ ಸಾರವರ್ಧಿತ/ಬಲವರ್ಧಿತಅಕ್ಕಿ ವಿತರಿಸುವ ಯೋಜನೆಗೆ ಅನುಮೋದನೆ ನೀಡಿದೆ. ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಮತ್ತು ರಾಜ್ಯ ಏಜೆನ್ಸಿಗಳು ಈಗಾಗಲೇ ಪೂರೈಕೆ ಮತ್ತು ವಿತರಣೆಗಾಗಿ ಬಲವರ್ಧಿತ ಅಕ್ಕಿಯನ್ನು ಸಂಗ್ರಹಿಸಿವೆ. ಬಲವರ್ಧಿತ ಅಕ್ಕಿಎಂದರೇನು ಮತ್ತು ಅದನ್ನು ಹೇಗೆ ತಯಾರಿಸಲಾಗುತ್ತದೆ ಬೇರೆ ಅಕ್ಕಿಗಿಂತ ಹೇಗೆ ಭಿನ್ನ ಮತ್ತು ಪೌಷ್ಠಿಕಾಂಶದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹೇಳುವ ಪ್ರಕಾರ ‘ಆಹಾರದ ಪೌಷ್ಟಿಕಾಂಶದ ಗುಣಮಟ್ಟವನ್ನು ಸುಧಾರಿಸಲು ಮತ್ತು ಆರೋಗ್ಯಕ್ಕೆ ಕನಿಷ್ಠ ಅಪಾಯದೊಂದಿಗೆ ಸಾರ್ವಜನಿಕ ಆರೋಗ್ಯ ಪ್ರಯೋಜನವನ್ನು ಒದಗಿಸಲು ಆಹಾರದಲ್ಲಿ ಅಗತ್ಯಸೂಕ್ಷ್ಮ ಪೋಷಕಾಂಶಗಳ ವಿಷಯವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸುವುದು’ ಎಂದು ಬಲವರ್ಧನೆಯನ್ನು ವ್ಯಾಖ್ಯಾನಿಸಿದೆ. ಸಾಮಾನ್ಯ ಅಕ್ಕಿಗೆ ಸೂಕ್ಷ್ಮ ಪೋಷಕಾಂಶಗಳನ್ನು ಸೇರಿಸಲು ವಿವಿಧ ತಂತ್ರಜ್ಞಾನಗಳು ಲಭ್ಯವಿದೆ. ಉದಾಹರಣೆಗೆ ಲೇಪನ, ಧೂಳು ಮತ್ತು ಹೊರತೆಗೆಯುವಿಕೆ ಮತ್ತು ಕೊನೆಯದಾಗಿ ‘ಎಕ್ಸ್ಟ್ರೂಡರ್’ ಯಂತ್ರವನ್ನು ಬಳಸಿಕೊಂಡು ಮಿಶ್ರಣದಿಂದ ಬಲವರ್ಧಿತ ಅಕ್ಕಿಕಾಳುಗಳ (ಎಫ್ಆರ್ಕೆ) ಉತ್ಪಾದನೆಯನ್ನು ಒಳಗೊಂಡಿರುತ್ತದೆ.
ಇದು ಭಾರತದ ಅತ್ಯುತ್ತಮ ತಂತ್ರಜ್ಞಾನ ಎಂದು ಪರಿಗಣಿಸಲಾಗಿದೆ. ಬಲವರ್ಧಿತ ಅಕ್ಕಿಯನ್ನು ಉತ್ಪಾದಿಸಲು ಸಾಮಾನ್ಯ ಅಕ್ಕಿಯೊಂದಿಗೆ ಬಲವರ್ಧಿತ ಅಕ್ಕಿಕಾಳುಗಳನ್ನು ಮಿಶ್ರಣ ಮಾಡಲಾಗುತ್ತದೆ.
ರಾಜ್ಯದ ವಿಜಯಪುರ, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಗದಗ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ಹಾವೇರಿ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.