News Karnataka Kannada
Thursday, May 09 2024
ಬೆಂಗಳೂರು

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

New Project (39)
Photo Credit :
ಬೆಂಗಳೂರು : ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ.
ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ ಜಾಗೃತಿ ಮೂಡಿಸಿರುವ ಮಾಜೀ ಸಚಿವರು ಈ ಬಾರಿ ಗಿಡ ಮರಗಳಿಗೂ ರಾಖಿ ಕಟ್ಟಿ ಅವುಗಳನ್ನೂ ರಕ್ಷಣೆ ಮಾಡಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾರೆ.
ಇಂದು ಸ್ವತಃ ಮರದ ಕೊಂಬೆಗೆ ರಾಖಿ ಕಟ್ಟಿ, “ಅಕ್ಕ ತಂಗಿಯರು ತಮ್ಮ ಅಣ್ಣ ತಮ್ಮಂದಿರಿಗೆ ತಮ್ಮ ರಕ್ಷಣೆಗಾಗಿ ಹಾಗೂ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ರಾಖಿ ಕಟ್ಟಿ ಹಬ್ಬ ಆಚರಿಸುತ್ತಾರೆ. ಅದೇ ರೀತಿ ನಾವು ಮಕ್ಕಳಲ್ಲಿ, ಯುವಜನರಲ್ಲಿ, ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಗಿಡ-ಮರಗಳಿಗೆ ರಕ್ಷಾಬಂಧನ ಮಾಡಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕು” ಎನ್ನುವ ಮೂಲಕ ಮಾದರಿ ರೀತಿಯಲ್ಲಿ ಆಚರಣೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಯಿತು.‌ ಮುಂದಿನ ದಿನಗಳಲ್ಲಿ ಇದನ್ನು ಪರಿಸರ ಸಂರಕ್ಷಣೆಗೆ ಅಭಿಯಾನದ ರೀತಿಯಲ್ಲಿ ವ್ಯವಸ್ಥಿತವಾಗಿ ಆಚರಿಸಬಹುದು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು