News Karnataka Kannada
Sunday, May 05 2024
ಬೆಂಗಳೂರು

ಪಿಎಸ್​ಐ ಅಭ್ಯರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್​ಗೆ ಬಸವರಾಜ ಬೊಮ್ಮಾಯಿ ಭೇಟಿ

Bommai (2)
Photo Credit :

ಬೆಂಗಳೂರು: ಅಕ್ರಮ ಆದ ಹಿನ್ನೆಲೆಯಲ್ಲಿ ರದ್ದು ರದ್ದುಪಡಿಸಿದ್ದ ಪಿಎಸ್​ಐ ಪರೀಕ್ಷೆಯನ್ನು ಮತ್ತೆ ನಡೆಸುವುದಾಗಿ ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿದ್ದು, ಈ ಹಿನ್ನೆಲೆ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಪೋಷಕರು ಸರಕಾರ ಈ ಆದೇಶವನ್ನು ಹಿಂಪಡೆಯಬೇಕು ಮತ್ತು ಅಕ್ರಮದಲ್ಲಿ ಭಾಗಿ ಆಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪಿಎಸ್ಐ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲರಿಗೂ ಶಿಕ್ಷೆ ಖಂಡಿತವಾಗಿಯೂ ಆಗುತ್ತದೆ.

ತನಿಖೆ ಆಗುವವರೆಗೂ ಕೂಡ ಪಿಎಸ್​ಐ ಅಭ್ಯರ್ಥಿಗಳು ಸಮಾಧಾನವಾಗಿ ಇರಿ. ನಾವು ಈಗ ಯಾವುದೇ ಭರವಸೆ ಕೊಡಲು ಸಾಧ್ಯ ಇಲ್ಲ. ತನಿಖೆ ಮುಗಿಯೋವರೆಗೂ ಕೂಡ ಭರವಸೆ ಕೊಡಲ್ಲ. ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡುತ್ತೇನೆ ಎಂದರು. ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು