News Karnataka Kannada
Saturday, May 04 2024
ಬೆಂಗಳೂರು

ಪುತ್ರಿಯನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Death 20072021
Photo Credit :

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಮಗಳನ್ನು ನೇಣಿಗೇರಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ  ನಡೆದಿದೆ.

ವರಲಕ್ಷ್ಮೀ(38) ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಎರಡು ಹೆಣ್ಮಕ್ಕಳ ತಾಯಿಯಾಗಿರುವ ವರಲಕ್ಷ್ಮೀ, ತಮ್ಮ 12 ವರ್ಷದ ಪುತ್ರಿ ದಿವ್ಯಾಶ್ರೀಗೆ ಆತ್ಮಹತ್ಯೆಗೆ ಪ್ರಚೋದಿಸಿ ಮನೆಯ ಫ್ಯಾನ್​ಗೆ ನೇಣುಬಿಗಿದುಕೊಳ್ಳಲು ಸಹಾಯ ಮಾಡಿದ್ದಾರೆ. ನಂತರ ತಾನೂ ಕೂಡ ಅದೇ ಪ್ಯಾನ್​ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ತಾಯಿ ನೇಣು ಹಾಕಿಕೊಳ್ಳುತ್ತಿರುವುದನ್ನು ನೋಡಿದ ಕಿರಿಯ ಮಗಳು ಮನೆ ಹೊರಗೆ ಬಂದು ಕಿರುಚಿಕೊಂಡಿದ್ದಾಳೆ. ತಕ್ಷಣ ಸ್ಥಳೀಯರು ತಾಯಿ ಮತ್ತು ಮಗಳು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ದಿವ್ಯಾ(12) ಅಸುನೀಗಿದ್ದು, ವರಲಕ್ಷ್ಮೀ (38) ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ವರಲಕ್ಷ್ಮಿ ಪತಿ ತಿಮ್ಮರಾಜು ಮೂರು ತಿಂಗಳ ಹಿಂದೆ ಕೋವಿಡ್ ಗೆ ಬಲಿಯಾಗಿದ್ದರು. ಹೀಗಾಗಿ ಜೀವನ ನಿರ್ವಹಣೆ ಕಷ್ಟವಾದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು