News Karnataka Kannada
Wednesday, May 01 2024
ಬೆಂಗಳೂರು

ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Woman killed in accident, son Ashwin and husband critically injured
Photo Credit :

ಭಾಲ್ಕಿ : ಮದುವೆಯ ಸಂಭ್ರಮದ ಖುಷಿಯಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಪುತ್ರ‌ನ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಹೋದ ದಂಪತಿಗಳು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರ್ ತಾಂಡಾ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಸೂರ್ಯಕಾಂತ ಪಾಟೀಲ ಅವರ ಮಗ ಸಾಯಿನಾಥ ಅವರ ಮದುವೆ ಡಿ. 26ಕ್ಕೆ ನಿಶ್ಚಯವಾಗಿದ್ದು, ಬೀದರ ನಗರದಲ್ಲಿ ಸಂಬಂಧಿಕರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿ ಭಾಲ್ಕಿಗೆ ವಾಪಸ್‌ ಆಗುವಾಗ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಲ್ಕಿ ತಾಲೂಕಿನ ಮೇತಿ ಮೇಳಕುಂದಾ ಗ್ರಾಮದ ಸೂರ್ಯಕಾಂತ ಪಾಟೀಲ (50)ಮತ್ತು ಅವರ ಪತ್ನಿ ಜಯಶ್ರೀ ಪಾಟೀಲ (45) ಮೃತ ದುರ್ದೈವಿಗಳು. ಭಾಲ್ಕಿ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಘಟನಾ ಸ್ಥಳಕ್ಕೆ ಶಾಸಕ ಈಶ್ವರ ಖಂಡ್ರೆ ಹಾಗೂ ‌ಪೊಲೀಸ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು