News Karnataka Kannada
Thursday, May 09 2024
ಬೆಂಗಳೂರು

ಪುನೀತ್ ರಾಜ್ ಕುಮಾರ್ ಗೆ `ಪದ್ಮಶ್ರೀ’ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು-ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ  ಮಹತ್ವದ ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಕಾರ್ಯದಲ್ಲಿ ಭಾಗಿಯಾಗುವಂತೆ ಕುಟುಂಬಸ್ಥರು ತಿಳಿಸಿದ್ದು, 11 ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದೇನೆ. ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ನಡೆಯಲಿದ್ದು, ಸಂಪುಟ ಸಭೆಯಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು