News Karnataka Kannada
Monday, May 06 2024
ಬೆಂಗಳೂರು

ಪ್ರತಿಪಕ್ಷಗಳು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುಳುಗಿದೆ : ಡಾ. ಸಿ ಎನ್ ಅಶ್ವತ್ಥನಾರಾಯಣ

Untitled 179
Photo Credit :

ಬೆಂಗಳೂರು: ಪ್ರತಿಪಕ್ಷಗಳದು ಬರೀ ವೋಟ್ ಬ್ಯಾಂಕ್ ರಾಜಕಾರಣ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ.ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ. ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ ಎಂದರು.

ಇನ್ನೂ ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು. ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ ಸಾಕಾರಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು