ಬೆಂಗಳೂರು: ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಸಚಿವ ಸಂಪುಟದ ಪುನರ್ರಚನೆಗೆ ಒಪ್ಪಿಗೆ ಪಡೆಯಲು ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮೂಲಗಳ ಪ್ರಕಾರ ಮೋದಿ ಭೇಟಿಗೆ ಸಂಜೆ 7ಕ್ಕೆ ಸಮಯ ನೀಡಿದ್ದು, ಇನ್ನೂ ಮಾತುಕತೆಯಲ್ಲಿ ಹಲವರನ್ನು ಕೈಬಿಟ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ವಿಚಾರವನ್ನುಪ್ರಸ್ತಾಪಿಸಲಿದ್ದಾರೆ.