ಬೆಂಗಳೂರು : ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಸಿದ್ದರಾಮಯ್ಯ ತಿಲಿಸಿದರು. ಈ ಸಂಬAಧ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸಿದ್ದರಾಮಯ್ಯ ತಾವು ಖುದ್ದು ಭೇಟಿ ನೀಡಿದ ಬಾಗಲಕೋಟೆ,ಬೆಳಗಾವಿ,ಉತ್ತರ ಕನ್ನಡ, ಗದಗ ಜಿಲ್ಲೆಗಳ ಚಿತ್ರಣವನ್ನು ವಿವರವಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಭಾರೀ ಪ್ರಮಾಣದ ಹಾನಿಯಾಗಿದೆ, ಎಷ್ಟೋ ಜನರು ತಮ್ಮ ಮನೆ, ಆಸ್ತಿ, ಮತ್ತು ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ.ಹಾಗಾಗಿ ಸರ್ಕಾರ ಯಾವುದೇ ವಿಳಂಬ ಮಾಡದೇ ಆದಷ್ಟು ಬೇಗ ಪರಿಹಾರ ನೀಡಬೇಕು ಎಂದು ಹೇಳಿದರು.