News Karnataka Kannada
Friday, May 03 2024
ಬೆಂಗಳೂರು

ಬಸವರಾಜ ಬೊಮ್ಮಾಯಿ ಅವರಿಂದ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ

New Project (5)
Photo Credit :

ಬೆಂಗಳೂರು: ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸರ್ ಎಂ ವಿಶ್ವೇಶ್ವರಯ್ಯನವರ 161ನೇ ಜಯಂತಿ. ವಿಶ್ವೇಶ್ವರಯ್ಯ ಜೀವನ ಮೌಲ್ಯ, ಅವರ ಬುದ್ಧಿವಂತಿಕೆ, ಶ್ರಮಿಕ ಮನೋಭಾವವನ್ನು ನಾವು ಅದರಲ್ಲೂ ಯುವಜನತೆ ಅನುಸರಿಸಬೇಕಾಗಿದೆ. ರೈತರು, ಕಾರ್ಮಿಕ ವರ್ಗ ಹೊಲದಲ್ಲಿ ಕೆಲಸ ಮಾಡುವ ಶ್ರಮಜೀವಿಗಳು ದೇಶದ ಆರ್ಥಿಕತೆಯನ್ನು ಹೆಚ್ಚಿಸುವವರು, ಅವರ ಪ್ರತಿನಿಧಿಯಾಗಿ ಸರ್ ಎಂ ವಿಶ್ವೇಶ್ವರಯ್ಯನವರು ನಿಲ್ಲುತ್ತಾರೆ ಎಂದರು.

ವಿಶ್ವೇಶ್ವರಯ್ಯನವರು ಈ ನಾಡಿನ ಭವ್ಯ ಏಳಿಗೆಗೆ ಕನಸು ಕಂಡಂತವರು, ಅವರಡಿಯಲ್ಲಿ ಹಲವಾರು ಕಾರ್ಯಕ್ರಮಗಳು ಆಗಿವೆ, ಅವರ ಸಾಧನೆ ಹಲವಾರು. ಕೆಆರ್ ಎಸ್ ಡ್ಯಾಂನಿಂದ ಹಿಡಿದು ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳು, ಕಾರ್ಖಾನೆಗಳು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಮಹಿಳಾ ಮೀಸಲಾತಿ ಕುರಿತು ಪ್ರಗತಿಪರ ಚಿಂತನೆಯನ್ನು ನಡೆಸಿದ್ದ ಸರ್ ಎಂ ವಿಶ್ವೇಶ್ವರಯ್ಯನವರಿಗೆ ನಮನಗಳನ್ನು ಸಲ್ಲಿಸುವ ದಿನವಿಂದು ಎಂದು ಹೇಳಿದರು.

ಅವರ ಸಂಕಲ್ಪದಂತೆ ನಡೆದು ನಾಡು ಕಟ್ಟುವ ಸಂಕಲ್ಪ ಮಾಡುವ ದಿನವಿಂದು. ಇಲ್ಲಿ ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಕಾರಂಜಿ ಕೂಡ ಆರಂಭಿಸಿದ್ದೇವೆ. ಇದೇ ರೀತಿ ಬೆಂಗಳೂರಿನ 30 ಕಡೆಗಳಲ್ಲಿ ನಿರ್ಮಿಸಲಾಗುತ್ತಿದ್ದು ಬೆಂಗಳೂರಿನ ಅಂದವನ್ನು ಹೆಚ್ಚಿಸಲಿದೆ. ಬಿಬಿಎಂಪಿ ಈ ಕೆಲಸವನ್ನು ಮಾಡುತ್ತಿದೆ. ಸರ್ ಎಂ ವಿಶ್ವೇಶ್ವರಯ್ಯನವರು ವಿದ್ಯುತ್ ಉತ್ಪಾದನೆ, ನೀರಾವರಿ, ಶಿಕ್ಷಣಕ್ಕೆ ನೀಡಿದ ಕಾಣಿಕೆಯ ಹಿನ್ನೆಲೆಯಲ್ಲಿ ಈ ನಾಡನ್ನು ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಶ್ರಮಪಡೋಣ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು