ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನಿರ್ಧರಿಸಿದ್ದಾರೆ. ಶೆಟ್ಟರ್ ಅವರು ಹಿಂದಿನ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದರು.
ಮುಖ್ಯಮಂತ್ರಿ ಹುದ್ದೆಗೆ ಶೆಟ್ಟರ್ ಹೆಸರು ಕೂಡ ಚರ್ಚೆಗೆ ಬಂದಿತ್ತು. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಬಳಿಕ, ಹೊಸ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯದೇ ಇರುವ ತೀರ್ಮಾನವನ್ನು ಅವರು ಕೈಗೊಂಡಿದ್ದಾರೆ.
‘ನಾನು ಸ್ಪೀಕರ್, ಸಚಿವ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗಿ ಕೆಲಸ ಮಾಡುವ ಆಕಾಂಕ್ಷೆ ನನಗಿಲ್ಲ. ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧನಾಗಿದ್ದೇನೆ’ ಎಂದರು.