ಕೊಳ್ಳೇಗಾಲ: ಚಾಮರಾಜನಗರದ ಮಹದೇವಸ್ವಾಮಿ ಬಂಧಿತ ಆರೋಪಿ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮದುವೆಯಾದ ವ್ಯಕ್ತಿಯನ್ನು ನಗರ ಪೊಲೀಸರು ಪೋಸ್ಕೊ ಕಾಯ್ದೆಯಡಿ ಬಂಧಿಸಿದ್ದಾರೆ.
ಆರೋಪಿಗೆ ಮದುವೆಯಾಗಿದ್ದು, ಒಬ್ಬ ಮಗ ಇದ್ದಾನೆ. ಹಾಗಿದ್ದರೂ ಬಾಲಕಿಯನ್ನು ಪ್ರೀತಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿ ಮದುವೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬೆಂಗಳೂರಿನಿಂದ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.