News Karnataka Kannada
Monday, April 29 2024
ಬೆಂಗಳೂರು

ಬಿಜೆಪಿಯಲ್ಲಿ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ : ಆರ್ ಅಶೋಕ್

Ashok Revenue 28 6 21
Photo Credit :

ಬೆಂಗಳೂರು: ರಾಜ್ಯ ಭಾರತಿಯ ಜನತಾ ಪಾರ್ಟಿಯಲ್ಲಿ ಬಸವರಾಜ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ, ಗೊಂದಲಗಳಿಲ್ಲ. ಪಕ್ಷ, ಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಿದೆ. ಮತ್ತೆ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ಪ್ರತಿಪಾದಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅಶೋಕ್, ಸಿಎಂ ಅವರು ವಿರೊಧಪಕ್ಷದವರನ್ನೇ ಓಲೈಸುತ್ತಿದ್ದಾರೆ ಎಂಬ ಅಸಮಾಧಾನ ಸ್ವಪಕ್ಷದ ಶಾಸಕರಲ್ಲಿದೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸಿನವರಿಗೆ ಜಾತಿ, ಧರ್ಮ‌ ಒಡೆಯುವುದೇ ಕೆಲಸವಾಗಿದೆ. ಮತಗಳಿಕೆಗಾಗಿ ಅವರೇನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ಅವರದು ಯುದ್ಧಕಾಲೇ ಶಸ್ತ್ರಭ್ಯಾಸ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಅನ್ನು ಜನತೆ ಮತ್ತೆ ತಿರಸ್ಕರಿಸುತ್ತಾರೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮದು ಚುನಾವಣಾ ದೃಷ್ಟಿಯ ಸಿದ್ಧತೆಯಲ್ಲ. ನಿರಂತರ ಸಿದ್ಧತೆ ನಡೆಯುತ್ತಲೇ ಇರುತ್ತದೆ ಎಂದರು.

ಕಾಂಗ್ರೆಸ್ ಒಕ್ಕಲಿಗರ ಸಮಾವೇಶ ಮಾಡಲು ಹೊರಟಿದೆ. ಅದಕ್ಕೆ ನಿಮ್ಮ ಪ್ರತಿಕ್ರಿಯೇನು ಎಂದು ಕೇಳಿದ ಪ್ರಶ್ನೆಗೆ, ಬಿಜೆಪಿ ಎಂದೂ ಜಾತಿ ರಾಜಕಾರಣ ಮಾಡುವುದಿಲ್ಲ. ನಮ್ಮದು ಧರ್ಮರಾಜಕಾರಣ. ಇದನ್ನು ಸ್ಪಷ್ಟವಾಗಿಯೇ ಹೇಳುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು