ಬಿಜೆಪಿ ಸೇರಲಿದ್ದಾರೆ ಘಟಾನುಘಟಿ ನಾಯಕರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇತ್ತೀಚೆಗೆ ಆಪರೇಷನ್ ಕಮಲ ಅನಿವಾರ್ಯ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಬೇರೆ ಪಕ್ಷದ ನಾಯಕರನ್ನು ಸೆಳೆಯುವ ಕಾರ್ಯ ಆರಂಭವಾಗಿದೆ. 5-6 ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದು ನಿಶ್ಚಿತ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಮೈಸೂರು ಭಾಗದ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ನಾಯಕರೊಂದಿಗೆ ಕೊನೆ ಹಂತದ ಮಾತುಕತೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ ಗ್ರೀನ್ ಸಿಗ್ನಲ್ ಬಾಕಿ ಇದೆ ಅಷ್ಟೇ ಎಂದರು.

ಯಾವುದೇ ಕಂಡಿಷನ್ ಗಳಿಲ್ಲದೇ ಬಿಜೆಪಿಗೆ ಬರಲು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷದವರೂ ಇದ್ದಾರೆ. ಯಾರು ಆ ನಾಯಕರು ಎಂದು ಹೇಳಲು ಸಾಧ್ಯವಿಲ್ಲ. ಕೊನೆ ಹಂತದ ಮಾತುಕತೆ ಮುಗಿಯಲಿ ನಂತರ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago