ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣದ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕಿಯನ್ನು ಜೀವನ್ ಭೀಮಾನಗರದ ಪೊಲೀಸರು ಬಂಧಿಸಿದ್ದಾರೆ. ಕಳೆದ 2 ತಿಂಗಳ ಹಿಂದೆ ಜಾಮೀನು ಪಡೆದಿದ್ದಂತ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ಪೊಲೀಸರಿಂದ ತಲೆ ಮರೆಸಿಕೊಂಡಿದ್ದನು.
ಆತ ಏಲ್ಲಿ ಇದ್ದಾನೆ ಎಂಬುದಾಗಿ ಯಾರಿಗೂ ಗೊತ್ತಿರಲಿಲ್ಲ. ಈ ಬಗ್ಗೆ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ಆತನ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ 5 ಸ್ಟಾರ್ ಹೋಟೆಲ್ ನಲ್ಲಿ ನಡೆದಂತ ಗಲಾಟೆ ಸಂಬಂಧ ಹೋಟೆಲ್ ಸಿಬ್ಬಂದಿಗಳು ಜೀವನ್ ಭೀಮಾ ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಸಂಬಂಧ ಸ್ಥಳಕ್ಕೆ ತೆರಳಿದ್ದಂತ ಪೊಲೀಸರಿಗೆ ಅಲ್ಲಿ ಇದ್ದದ್ದು ಹ್ಯಾಕರ್ ಶ್ರೀಕಿ ಎಂಬುದಾಗಿ ತಿಳಿದು ಬಿಂದಿದೆ. ಹೀಗಾಗಿ ಹ್ಯಾಕರ್ ಶ್ರೀಕಿ ಹಾಗೂ ಅವರ ಮೇಲೆ ಹಲ್ಲೆ ನಡೆಸಿದ್ದಂತ ವಿಷ್ಣು ಭಟ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.