ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಆಧಾರ್ ಕಾರ್ಡ್ , ಇ – ಕೆವೈಸಿ ಪಡೆಯಲು ಆಹಾರ ಇಲಾಖೆ ಸಜ್ಜಾಗಿದ್ದು, ಅಕ್ಟೋಬರ್ 31 ರವರೆಗೆ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಇ – ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ .
ನ್ಯಾಯಬೆಲೆ ಅಂಗಡಿಗಳಲ್ಲಿ ಪಿಓಎಸ್ ವ್ಯವಸ್ಥೆ ಜಾರಿಯಲ್ಲಿದ್ದು, ಈ ಮೂಲಕವೇ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಇ ಕೆವೈಸಿ ಮಾಡದೆ ಇರುವ ಫಲಾನುಭವಿಗಲಿಗೆ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಬಿಪಿಎಲ್ ಕಾರ್ಡ್ ದಾರರಿಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಹಂಚಿಕೆ ರದ್ದು ಮಾಡಲಾಗುವುದು. ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಮಾಡಲು ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಮಾಡಲು ಅ.31 ಕೊನೆ ದಿನವಾಗಿದೆ.