ಬೆಂಗಳೂರು: ರಾಜ್ಯ ಸರ್ಕಾರವು ನಗರ ಹಾಗೂ ಗ್ರಾಮೀಣ ಪ್ರದೇಶದ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ.
ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 40 ಯೂನಿಟ್ ವರೆಗೆ ಇದ್ದ ಉಚಿತ ವಿದ್ಯುತ್ ಪೂರೈಕೆ ಪ್ರಮಾಣವನ್ನು 75 ಯೂನಿಟ್ ಗೆ ಹೆಚ್ಚಳ ಮಾಡಿ ಮೇ. 1 ರಿಂದಲೇ ಪೂರ್ವಾನ್ವಯವಾಗುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಇಂಧನ ಇಲಾಖೆ, ಈ ಹಿಂದೆ ಇದ್ದ 40 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಸೌಲಭ್ಯವಿತ್ತು. ಇನ್ಮುಂದೆ ಎಸ್ ಸಿ, ಎಸ್ ಟಿ ಗೆ ಸೇರಿದ ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ಬಳಕೆದಾರರು ಸೇರಿದಂತೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಬಿಪಿಎಲ್ ಕುಟುಂಬದವರಿಗ ಉಚಿತ ಮಾಸಿಕ 75 ಯೂನಿಟ್ ವಿದ್ಯುತ್ ಸೌಲಭ್ಯ ಸಿಗಲಿದೆ.