ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು

 ಬೆಂಗಳೂರು: ನಾಗವಾರ- ಥಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಡೆಲಿವರಿ ಬಾಯ್ ದೇವಣ್ಣ (25) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವರ್ಷದ ಮಾರ್ಚ್‌ ತಿಂಗಳ ನಂತರ ಬಿಬಿಎಂಪಿ ಕಸದ ಲಾರಿಯಿಂದ ಸಂಭವಿಸಿದ ನಾಲ್ಕನೇ ದುರ್ಘಟನೆ ಇದು.

ಈ ಅವಧಿಯಲ್ಲಿ ನಾಲ್ವರು ಬಿಬಿಎಂಪಿ ಕಸ ಸಾಗಣೆ ಲಾರಿಯಡಿ ಸಿಲುಕಿ ಜೀವ ಕಳೆದುಕೊಂಡಿದ್ದಾರೆ.

‘ಯಾದಗಿರಿ ಜಿಲ್ಲೆಯ ಸುರಪುರದ ದೇವಣ್ಣ, ಕೊತ್ತನೂರಿನಲ್ಲಿ ನೆಲೆಸಿದ್ದರು. ‘ಸ್ವಿಗ್ಗಿ’ ಆಹಾರ ಪೂರೈಕೆ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗ್ರಾಹಕರೊಬ್ಬರಿಗೆ ಆಹಾರ ಪೂರೈಸಲು ಬೈಕ್‌ನಲ್ಲಿ ಹೊರಟಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

‘ದೇವಣ್ಣ ಅವರು ಬೈಕ್ (ಕೆಎ 03 ಕೆಕೆ 5475) ಚಲಾಯಿಸಿಕೊಂಡು ನಾಗವಾರದಿಂದ ಥಣಿಸಂದ್ರ ಮುಖ್ಯರಸ್ತೆ ಮೂಲಕ ಹೆಗ್ಗಡೆನಗರಕ್ಕೆ ಹೊರಟಿದ್ದರು. ಅದೇ ಮಾರ್ಗದಲ್ಲಿ ಅತೀ ವೇಗವಾಗಿ ತೆರಳುತ್ತಿದ್ದ ಬಿಬಿಎಂಪಿ ಕಸ ಸಾಗಣೆ ಲಾರಿ, ಬೈಕ್‌ ಡಿಕ್ಕಿ ಹೊಡೆದಿತ್ತು. ಬೈಕ್‌ನಿಂದ ಬಿದ್ದ ದೇವಣ್ಣ ತಲೆ ಮೇಲೆಯೇ ಲಾರಿ ಚಕ್ರ ಹರಿದಿತ್ತು. ತೀವ್ರ ರಕ್ತಸ್ರಾವದಿಂದ ದೇವಣ್ಣ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ಪಡೆಯಲಾಗಿದೆ’ ಎಂದೂ ಪೊಲೀಸರು ಹೇಳಿದರು.

ಚಾಲಕ ಬಂಧನ: ‘ಲಾರಿ ಚಾಲಕ ದಿನೇಶ್ ನಾಯಕ್ ಅಜಾಗರೂಕತೆ ಚಾಲನೆ ಹಾಗೂ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಲಾರಿಯನ್ನು ಜಪ್ತಿ ಮಾಡಿ, ಚಾಲಕ ದಿನೇಶ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ದಂಡ ವಿಧಿಸಿದರೂ ತಪ್ಪದ ಅಪಘಾತ: ಬಿಬಿಎಂಪಿ ಕಸ ಸಾಗಣೆ ಲಾರಿಯಿಂದಾಗಿ ನಗರದಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಇದನ್ನು ತಡೆಯಲು ಸಂಚಾರ ಪೊಲೀಸರು ಇತ್ತೀಚೆಗಷ್ಟೇ ವಿಶೇಷ ಕಾರ್ಯಾಚರಣೆ ನಡೆಸಿದ್ದರು.

ಅತೀ ವೇಗದ ಚಾಲನೆ, ಮೊಬೈಲ್‌ನಲ್ಲಿ ಮಾತನಾಡುತ್ತ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘಿಸಿದ ಕಸ ಸಾಗಣೆ ಲಾರಿಗಳ ಚಾಲಕರಿಗೆ ಪೊಲೀಸರು ದಂಡ ವಿಧಿಸಿದ್ದರು. ಕೆಲ, ಲಾರಿಗಳನ್ನು ಜಪ್ತಿ ಮಾಡಿದ್ದರು.

‘ಬಿಬಿಎಂಪಿ ಕಸ ಸಾಗಣೆ ಲಾರಿ ಚಾಲಕರಿಗೆ ಹಾಗೂ ಮಾಲೀಕರಿಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದಾರೆ. ಅಷ್ಟಾದರೂ ಅವರು ಬುದ್ದಿ ಕಲಿಯುತ್ತಿಲ್ಲ. ಇಂಥ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago