ಬೆಂಗಳೂರು: ಸಿಎಂ
ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಾರ್ಡಗಳ ಪುನರ್ ವಿಗಂಡಣೆ ಅಂತಿಮ ಹಂತದಲ್ಲಿದೆ. ಕೂಡಲೇ ಅಧಿಸೂಚನೆ ಹೊರಡಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲಂ ನೇತೃತ್ವದ ಆಯೋಗವು ಎಂಟು ವಾರಗಳಲ್ಲಿ ಒಬಿಸಿ ಮೀಸಲಾತಿ ನಿಗದಿ ಮಾಡಲಿದೆ. ಹಿಂದುಳಿದ ವರ್ಗಗಳ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲು ನ್ಯಾಯಾಲಯ ಅವಕಾಶ ನೀಡಿರುವ ಸರ್ವೋಚ್ಛ ನ್ಯಾಯಾಲಯ ನಮ್ಮ ವಾದಕ್ಕೆ ಮನ್ನಣೆ ನೀಡಿದೆ ಎಂದರು.
ಚುನಾವಣೆಗೆ ಬಿಜೆಪಿ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು