ಬೆಂಗಳೂರು : ರಾಜ್ಯದಲ್ಲಿ ಇನ್ನು 3-4ವಾರದಲ್ಲಿ ಕೊರೊನಾ 4ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಈ ಬಾರಿಯ ಅಲೆಗೆ ಬಿಎ 2 ರೂಪಾಂತರಿ ವೈರಸ್ ಕಾರಣವಾಗಬಹುದು. ಕೊರೊನಾ 3ನೇ ಅಲೆಯಲ್ಲಿ ಸೋಂಕಿತರು ಯಾವೆಲ್ಲ ಲಕ್ಷಣ ಹೊಂದುತ್ತಿದ್ದರೂ, ಅದೇ ಲಕ್ಷಣಗಳು ನಾಲ್ಕನೇ ಅಲೆಯಲ್ಲಿಯೂ ಗೋಚರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿಯೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿರುತ್ತದೆ. ಆದರೆ ಸೋಂಕು ವ್ಯಾಪಕವಾಗಿರುತ್ತದೆ ಎಂದೂ ಡಾ. ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್ಗಳಲ್ಲಿ ಏರಿಕೆ ಕಂಡುಬರಲಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಶ್ವಾಸಕೋಶ, ಹೃದಯ ಸಮಸ್ಯೆ, ಕ್ಯಾನ್ಸರ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಅತ್ಯಂತ ಜಾಗರೂಕರಾಗಿ ಇರಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ. ಜ್ವರ, ಕೆಮ್ಮು-ಶೀತವನ್ನು ನಿರ್ಲಕ್ಷಿಸಬೇಡಿ. ಕೂಡಲೇ ಕೊವಿಡ್ 19 ಟೆಸ್ಟ್ಗೆ ಒಳಗಾಗಿ. ಲಸಿಕೆ ತೆಗೆದುಕೊಂಡಿದ್ದೇವೆ. ಏನಾಗುವುದಿಲ್ಲ ಎಂಬ ನಿರ್ಲಕ್ಷವಂತೂ ಬೇಡವೇ ಬೇಡ ಎಂದಿದ್ದಾರೆ.