News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸುಮಲತಾ ಅಸಮಾಧಾನ

Sumalatha Mandya 5 7 21
Photo Credit :

ಮಂಡ್ಯ: ಇಂದು ಜಿಲ್ಲೆಯ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ, ಕೋಡಿಹಳ್ಳಿ ಗ್ರಾಮಕ್ಕೆ ಸಂಸದೆ ಸುಮಲತಾ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ವೈಜ್ಞಾನಿಕವಾಗಿ ಹೆದ್ದಾರಿ ಕಾಮಗಾರಿ ಆಗುತ್ತಿಲ್ಲ. ಈ ಹಿಂದೆ ಸ್ಥಳ ವೀಕ್ಷಣೆ ಮಾಡಿದ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ಇದನ್ನು ತರಲಾಗಿದೆ. ಹೆದ್ದಾರಿಯಲ್ಲಿ ಆಕ್ಸಿಸ್ ರೋಡ್ ಇಲ್ಲ, ಎಕ್ಸಿಟ್ ರೀಡ್ ಕೊಟ್ಟಿಲ್ಲ, ಸರ್ವಿಸ್ ರೋಡ್ ಕೊಟ್ಟಿಲ್ಲ. ಇದರ ಬಗ್ಗೆ ಪ್ರಶ್ನಿಸಿದಾಗಲೆಲ್ಲಾ ಭರವಸೆ ಕೊಟ್ಟುಕೊಂಡು ಬರುತ್ತಿದ್ದಾರೆ. ನಾನು ಇದರ ಬಗ್ಗೆ ಹೋರಾಟ ಮಾಡೋ ಭರವಸೆ ನೀಡಿದ್ದೀನಿ. ಇದರ ಬಗ್ಗೆ ಮಾತನಾಡಿದ್ರೆ ಅದನ್ನ ಬೇರೆ ರೀತಿ ಬಿಂಬಿಸಲಾಗುತ್ತೆ. ಹೆದ್ದಾರಿ ಕಾಮಗಾರಿಗೆ ಸುಮಲತಾ ತಡೆ ಮಾಡ್ತಾರೆ ಅಂತ ಬಿಂಬಿಸಲಾಗುತ್ತೆ. ಸ್ಥಳೀಯರ ವಿರೋಧದ ನಡುವೆ ಕಾಮಗಾರಿ ಮಾಡಲು ಸಾಧ್ಯವಿಲ್ಲ. ಸ್ಥಳೀಯರಿಗೆ ತೊಂದರೆ ಆಗದಂತೆ ಕಾಮಗಾರಿ ಮಾಡಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು