News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು : ರಾಜ್ಯ ರೈತ ಸಂಘಟನೆಗಳಬೃಹತ್ ಪ್ರತಿಭಟನೆ, ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ

Farmers 'mahapanchayat' Against New Agricultural Laws Introduced By The Government In Muzaffarnagar
Photo Credit :

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಹೃದಯ ಭಾಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಯಿತು.

ಫ್ರೀಡಂ ಪಾರ್ಕ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್, ಸುತ್ತಮುತ್ತ ಅನೇಕ ಪ್ರಯಾಣಿಕರು ಗಂಟೆಗಂಟೆಲೇ ರಸ್ತೆಯಲ್ಲೆ ನಿಲ್ಲುವಂತಾಯಿತು. ಆದಾಗ್ಯೂ, ವಿಧಾನಸೌಧ ಸುತ್ತಮುತ್ತ ಸೆಕ್ಷನ್ 144 ಜಾರಿಯಿಂದ ಕೆ.ಆರ್. ಸರ್ಕಲ್ ಬಳಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ತಡೆದರು.

ರಾಜ್ಯದ ವಿವಿಧೆಡೆಯಿಂದ ನಗರಕ್ಕೆ ಆಗಮಿಸಿದ ರೈತ ಸಂಘಟನೆಗಳ ಸದಸ್ಯರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಜಾಥಾ ನಡೆಸಿ, ಕೇಂದ್ರದ ನೂತನ ಕೃಷಿ ಕಾನೂನುಗಳು ಮತ್ತು ಅನೇಕ ಸರ್ಕಾರಿ ವಲಯಗಳ ಖಾಸಗೀಕರಣ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ರೈತ ಸಂಘಟನೆಗಳ ಪ್ರತಿಭಟನೆಯಿಂದಾಗಿ ಮೆಜೆಸ್ಟಿಕ್, ಆನಂದ್ ರಾವ್ ವೃತ್ತ, ಶೇಷಾದ್ರಿಪುರಂ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಕೆಆರ್ ಸರ್ಕಲ್ ನಲ್ಲಿ ತಡೆಯುವುದಕ್ಕೆ ಪೊಲೀಸರ ವಿರುದ್ಧ ರೈತರು ವಿರೋಧ ವ್ಯಕ್ತಪಡಿಸಿದ್ದರಿಂದ ಈ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಪರಿಸ್ಥಿತಿ ಬಿಗಡಾಯಿಸಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ತಲುಪಿದರೆ, ಎಸ್ ಟಿ ಸೋಮಶೇಖರ್ ಅರ್ಧ ಗಂಟೆಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕುವಂತಾಯಿತು.

ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು