ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿಗೆ ಹರಿದಾಡಿದ ಸುದ್ದಿಯೊಂದಕ್ಕೆ ಸ್ಪಷ್ಟನೆ ಸಿಕ್ಕಿದೆ .
ಬೈಕ್, ಟಿ.ವಿ, ಫ್ರಿಡ್ಜ್ ಹೊಂದಿದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸ್ಪಷ್ಟನೆ ಕೊಟ್ಟಿರುವ ರಾಜ್ಯ ಆಹಾರ ಮತ್ತು ನಾಗರೀಕ ಇಲಾಖೆ,
ಈ ರೀತಿ ಯಾವುದೇ ಆದೇಶವನ್ನ ಸರ್ಕಾರ ಹೊರಡಿಸಿಲ್ಲ ಎಂದು ತಿಳಿಸಿದರು.
ಬೈಕ್, ಟಿವಿ, ಫ್ರಿಡ್ಜ್ ಹೊಂದಿರೋ ಕುಟುಂಬದವರು ಆದ್ಯತಾ ಪಡಿತರ ಪಡೆಯಲು ಅರ್ಹರು. ಇದು ಸರ್ಕಾರ ನಿಗದಿಪಡಿಸಿರೋ ಮಾನದಂಡದಲ್ಲೇ ಅವಕಾಶ ಇದೆ. ಮೂರು ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರುವ ಮತ್ತು ವಾರ್ಷಿಕ 1.20ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬ ಸ್ಥಿತಿಗತಿ ಪರಿಶೀಲಿಸಿ. ಬಿಪಿಎಲ್ ಕಾರ್ಡಿನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆ ಮಾಡಲು ಡಿಸಿಗಳಿಗೆ ಆದೇಶ ಎಂದು ಸ್ಪಷ್ಟಪಡಿಸಿದೆ.
ಯಾವುದೇ ಅಧಿಕಾರಿ ಆಧಾರ ರಹಿತವಾಗಿ ಕಾರ್ಡ್ ರದ್ದುಪಡಿಸಿದರೆ ತಹಶೀಲ್ದಾರ್ ಅಥವಾ ಡಿಸಿಗಳಿಗೆ ದೂರು ನೀಡಬಹುದು ಎಂದು ಆಹಾರ ಇಲಾಖೆ ಹೇಳಿದೆ.