ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಲಿದ್ದು, ಇದಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಗಣೇಶ ಹಬ್ಬದ ಬಳಿಕ ಶಾಸಕ ಬಿ.ಎಸ್.ಯಡಿಯೂರಪ್ಪ ನಡೆಸಲಿರುವ ರಾಜ್ಯ ಪ್ರವಾಸದಲ್ಲಿ ತಾವೂ ಭಾಗವಹಿಸುವುದಾಗಿ ನಳಿನ್ ಕಟೀಲ್ ತಿಳಿಸಿದರು. ರಾಜ್ಯ ಪ್ರವಾಸದ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದರು.
ವರಿಷ್ಠರು ಪ್ರವಾಸಕ್ಕೆ ಅನುಮತಿ ನೀಡಿಲ್ಲ. ಆದ್ದರಿಂದ ಪ್ರವಾಸ ಮಾಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿತ್ತು. ನಳಿನ್ ಅವರು ಪ್ರವಾಸದ ಕುರಿತಾದ ಗೊಂದಲ ನಿವಾರಿಸಿದ್ದಾರೆ.