ಬೆಂಗಳೂರು

ಭವಿಷ್ಯ ನುಡಿದ ಕೆ ಎಸ್ ಈಶ್ವರಪ್ಪ

ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆ  ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್  ಪಕ್ಷ ಎರಡು ಹೋಳಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಹಾಗು ಬಿಜೆಪಿ ಹಿಂದುಳಿದ ವರ್ಗಗಳ  ಮೋರ್ಚಾ ಉಸ್ತುವಾರಿ ಕೆ ಎಸ್ ಈಶ್ವರಪ್ಪ  ಭವಿಷ್ಯ ನುಡಿದರು.

ಬುಧವಾರ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಆಯೋಜಿಸಿದ್ದ ಸಮುದಾಯದ ಜನ ಪ್ರತಿನಿಧಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಹಿಂದುಳಿದವರಿಗೆ ಮೋಸ ಮಾಡಿದ  ಪಕ್ಷ ಕಾಂಗ್ರೆಸ್. ಅದನ್ನು ಒಬಿಸಿ ಸಮುದಾಯದ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದರು.

ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದಿಂದ ಪ್ರಧಾನಿ ಆಗಿದ್ದರೆ ಕಾಂಗ್ರೆಸ್‌ನವರು ಮೋದಿಯವರನ್ನು ರಾಷ್ಟ್ರಭಕ್ತ ಮೋದಿ ಎಂದು ಕರೆಯುತ್ತಿದ್ದರು.  ಹಿಂದುಳಿದ ವರ್ಗಗಳ ಪ್ರಧಾನಿ ಎಂದೇ ಕರೆಯುತ್ತಿದ್ದರು. ಮೋದಿ ಅವರು ಹಿಂದುಳಿದ ವರ್ಗದವರು ನಿಜ. ಅದರೆ ನಾವು  ಮೋದಿ ಅವರನ್ನು ರಾಷ್ಟ್ರಭಕ್ತ ಎಂದು ಕರೆಯುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷ ಮಾತೆತ್ತಿದರೆ  ಹಿಂದುಳಿದ  ವರ್ಗಗಳ ಉದ್ಧಾರ ಮಾಡುತ್ತೇವೆ ಎನ್ನುತ್ತಾರೆ. ಈಗ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ.  ಒಂದೇ ದಿನ ಅದರೂ ಹಿಂದುಳಿದ ವರ್ಗಗಳ ಬಗ್ಗೆ ಮಾತಾಡಲಿಲ್ಲ. ಕೇಂದ್ರದಲ್ಲಿ 27 ಜನ ಹಿಂದುಳಿದ ವರ್ಗದವರನ್ನು ಸಚಿವರನ್ನಾಗಿ ಮಾಡಲಾಗಿದೆ. ಇದಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಅಭಿನಂದನೆಗಳನ್ನಾದರು ಸಲ್ಲಿಸಬೇಕು ಎಂದು ಟಾಂಗ್ ನೀಡಿದರು.

Raksha Deshpande

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

35 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

42 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

52 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago