News Karnataka Kannada
Saturday, May 04 2024
ಬೆಂಗಳೂರು

ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಂದು ಆತ್ಮಹತ್ಯೆ: ನಿಮ್ಹಾನ್ಸ್

Suicide Hyderabad
Photo Credit :

ಬೆಂಗಳೂರು: ದೇಶದಲ್ಲಿ ಪ್ರತಿ ನಾಲ್ಕು ನಿಮಿಷಗಳಿಗೆ ಕನಿಷ್ಠ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಕೋವಿಡ್ ಕಾಣಿಸಿಕೊಂಡ ಬಳಿಕ ಯುವಜನತೆ ಹೆಚ್ಚಾಗಿ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌) ತಿಳಿಸಿದೆ.

ವಿಶ್ವ ಆತ್ಮಹತ್ಯೆ ತಡೆದಿನದ ಪ್ರಯುಕ್ತ ಸಂಸ್ಥೆಯು ಸೆಪ್ಟೆಂಬರ್ ತಿಂಗಳು ಪೂರ್ತಿ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ.

ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮೂರನೇ ಒಂದರಷ್ಟು ಮಂದಿ ಮಾತ್ರ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಉಳಿದ ಎರಡು ಭಾಗದಷ್ಟು ಮಂದಿ ಆರ್ಥಿಕ ಸಮಸ್ಯೆ ಹಾಗೂ ಕುಟುಂಬದ ಬಾಂಧವ್ಯ ಕಡಿದುಕೊಳ್ಳುವಿಕೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಪರಿಸರ ಮಾಲಿನ್ಯ, ಶಬ್ದ ಮಾಲಿನ್ಯ ಕೂಡಾ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತಿದೆ. ಬಹುತೇಕ ಎಲ್ಲ ಮಾನಸಿಕ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಮನಸ್ಸಿನ ನಿಗ್ರಹವಿಟ್ಟುಕೊಂಡಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು ಎಂದು ನಿಮ್ಹಾನ್ಸ್ ವೈದ್ಯರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು