ಬೆಂಗಳೂರು: ಒಂದು ವರ್ಷದ ಬಳಿಕ ಮಕ್ಕಳು ಶಾಲೆ ಮುಖ ನೋಡುತ್ತಿವೆ. ಹೀಗಾಗಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಸಾಧ್ಯವಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ಈ ಮೂಲಕ ಭಾರತ್ ಬಂದ್ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ ಶನಿವಾರ ಹೇಳಿದೆ.
ಭಾರತ್ ಬಂದ್ ಕುರಿತು ಹೇಳಿಕೆ ನೀಡಿರುವ ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಅವರು, ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಸಂಘಟನೆಗಳು ಬಂದ್ಗೆ ನೈತಿಕ ಬೆಂಬಲವಷ್ಟೇ ನೀಡಲು ತೀರ್ಮಾನಿಸಿವೆ ಎಂದು ಹೇಳಿದ್ದಾರೆ.
ಆ ದಿನದಂದು ಶಾಲಾ-ಕಾಲೇಜುಗಳನ್ನ ಮುಚ್ಚುವುದಿಲ್ಲ. ಕೋವಿಡ್ನಿಂದಾಗಿ ಈಗಷ್ಟೇ ಶಾಲಾ-ಕಾಲೇಜು ಆರಂಭವಾಗಿವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಗಳನ್ನ ಬಂದ್ ಮಾಡಲು ಆಗುವುದಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ಈ ಮೂಲಕ ಭಾರತ್ ಬಂದ್ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.